ಮೈಸೂರು

ಹಸು, ಎಮ್ಮೆಗಳಿಗೆ ಚರ್ಮಗಂಟು ರೋಗ; ಉತ್ತರಕರ್ನಾಟಕ ಭಾಗದಲ್ಲಿ ಹೆಚ್ಚು

ಮೈಸೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿಸಹಸ್ರಾರು ಜಾನುವಾರುಗಳಲ್ಲಿಕಾಣಿಸಿಕೊಂಡಿರುವ ಚರ್ಮ ಗಂಟು ರೋಗದಿಂದ ಹಾಲಿನ ಉತ್ಪಾದನೆ ಇಳಿಕೆಯಾಗುವ ಆತಂಕ ಎದುರಾಗಿದೆ.

ರಾಜ್ಯದಲ್ಲಿಸುಮಾರು 3,076 ಜಾನುವಾರುಗಳಲ್ಲಿ ರೋಗ ಪತ್ತೆಯಾಗಿದೆ. ಈ ಕಾಯಿಲೆ ಹರಡದಂತೆ ತಡೆಯಲು ಈಗಾಗಲೇ 5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. 25 ಲಕ್ಷ ಲಸಿಕೆ ಸಂಗ್ರಹವಿದ್ದು, ಅಕ್ಟೋಬರ್‌ ನವೆಂಬರ್‌  ತಿಂಗಳಲ್ಲಿ ಪೂರೈಸಲಾಗುವುದು. ಮೈಸೂರು ಜಿಲ್ಲೆಯ ಸರಗೂರು, ಕೆ ಆರ್‌ ನಗರ,  ಟಿ ನರಸೀಪುರ ದಲ್ಲಿ ಮಾತ್ರ ಗಂಟು ರೋಗ ಹಸು ಇದ್ದು ಅದಕ್ಕೆ ಲಸಿಕೆಯನ್ನು ನೀಡಲಾಗಿದೆ.ಮತ್ತು ಮರಣ ಹೊಂದಿದ ಹಸುವಿಗೆ ಪರಿಹಾರಕ್ಕಾಗಿ ಸರ್ಕಾರಕ್ಕೆ  ಅರ್ಜಿ ಕೂಡ ಸಲ್ಲಿಸಲಾಗಿದೆ. ಸದ್ಯದ ಪರಿಸ್ಥಿತಿಗೆ ಉಳಿದ ಯಾವುದೇ ತಾಲ್ಲೂಕಿನಲ್ಲಿ ಈ ಸಮಸ್ಯೆ ಇರುವುದಿಲ್ಲ ಎಂದು ಇಲಾಖೆಯ ಉಪ ನಿರ್ದೇಶಕ ಡಾ. ಬಿ ಎನ್‌ ಷಡಕ್ಷರ ಮೂರ್ತಿ ʼಆಂದೋಲನ ಪತ್ರಿಕೆಗೆʼತಿಳಿಸಿದರು.

ರೋಗ ಹರಡುವುದು ಹೇಗೆ : ಈ ವರ್ಷ ಮಳೆ ಹೆಚ್ಚಾದ ಪರಿಣಾಮ ನೊಣ, ಸೊಳ್ಳೆ ಹಾಗೂ ಉಣ್ಣೆ ಹುಳಗಳ ಉತ್ಪತ್ತಿ ಹೆಚ್ಚಾಗಿದೆ. ಇವು ಅನ್ಯ ರಾಜ್ಯಗಳಿಂದ ಹಾರಿ ಬಂದು ಈ ಕಾಯಿಲೆಯನ್ನು ಹರಡಿವೆ. ಅದೂ ಮಹಾರಾಷ್ಟ್ರ, ರಾಜಸ್ತಾನ, ಗುಜರಾತ್‌ನ ಗಡಿ ಜಿಲ್ಲೆಗಳಲ್ಲಿಈ ಕಾಯಿಲೆ ಹೆಚ್ಚು ಕಾಣಿಸಿಕೊಂಡಿದೆ ಇದರಿಂದ ಮುನ್ನೆಚ್ಚ್ರಿಕೆ ಕ್ರಮವಹಿಸಿದ್ದಲ್ಲಿ ಈ ರೋಗ ಹರಡುವುದಿಲ್ಲ

ಮೂರು ವರ್ಷಕ್ಕೊಮ್ಮೆ ಬರುವ ಗಂಟು ರೋಗ : ಒಮ್ಮೆ ಲಸಿಕೆ ಹಾಕಿದರೆ ಮೂರು ವರ್ಷದವರೆಗೆ ಚರ್ಮಗಂಟು ಕಾಯಿಲೆ ಬರದಂತೆ ತಡೆಯಬಹುದಾದ ರೋಗ ನಿರೋಧಕ ಶಕ್ತಿ ಹೊಂದಿದೆ. ಆದರೆ, ಕಾಯಿಲೆ ಬಂದ ಹಸುವಿಗೆ ಈ ಲಸಿಕೆ ಹಾಕಬಾರದು. ಏಕೆಂದರೆ ಒಂದು ಬಾರಿ ಕಾಯಿಲೆ ಬಂದರೆ ಆ ಹಸುವಿಗೆ ಮತ್ತೆ ಮೂರು ವರ್ಷಗಳ ಕಾಲ ಆ ಕಾಯಿಲೆ ಮರುಕಳುಹಿಸುವುದಿಲ್ಲ.

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

9 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

17 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

17 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

17 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

20 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 hours ago