ಮೈಸೂರು

ಜಾತಿ ಜನಗಣತಿ | ಮುಂದಿನ ಸಭೆಯು ವಿಫಲವಾಗಲಿದೆ ; ಎಂಎಲ್‌ಸಿ ಮಂಜೇಗೌಡ (MLC Manjegowda)

ಮೈಸೂರು : ಜಾತಿ ಜನಗಣತಿ ವರದಿ ಬಗ್ಗೆ ಗುರುವಾರ (Thursday) ಸಿಎಂ ಸಿದ್ದರಾಮಯ್ಯ (CM Siddaramaiah) ನಡೆಸಿದ ವಿಶೇಷ ಸಭೆ ವಿಫಲವಾಗಿದೆ. ಹೀಗೆಯೇ ಮೇ.2 ರಂದು ನಡೆಸಲು ನಿಶ್ಚಯಿಸಿರುವ ಸಭೆಯು ಕೂಡ ಸಫಲವಾಗಲ್ಲ ಎಂದು ಎಂಎಲ್‌ಸಿ ಮಂಜೇಗೌಡ (MLC Manjegowda) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವರದಿ ನೂರಕ್ಕೆ ನೂರರಷ್ಟು ಜಾರಿಗೆ ಬರಲ್ಲ. ವರದಿ ಅನುಷ್ಠಾನ ತರಲಿಕ್ಕೆ ಯಾರು ಹೊರಟಿದ್ದಾರೆ ಅವರಿಗೂ ಜಾರಿಗೆ ತರಲಿಕ್ಕೆ ಇಷ್ಟ ಇಲ್ಲ. ಇದೊಂದು ರೀತಿ ಮಗು ಚಿವುಟಿ ತೊಟ್ಟಿಲನ್ನೂ ತೂಗುವ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.

ಹೆಚ್ಚಿನ ಮಾಹಿತಿ:- Caste Census | ವಿಶೇಷ ಸಭೆಯಲ್ಲಿ ಸಹೋದ್ಯೋಗಿಗಳಿಗೆ ಸಿ.ಎಂ ಹೇಳಿದ್ದೇನು?

ರಾಜ್ಯದಲ್ಲಿ ಒಕ್ಕಲಿಗರು, ಲಿಂಗಾಯತರು ಒಬ್ಬರ ಪರವಾಗಿಲ್ಲ. ಎಲ್ಲ ಪಕ್ಷದಲ್ಲೂ ಹೆಚ್ಚೆ ಇದ್ದಾರೆ ಎಂದು ತಿಳಿದಿರುವ ಸಿದ್ದರಾಮಯ್ಯ ಅವರು ರಾಜಕೀಯವಾಗಿ ಸಮುದಾಯವನ್ನು ಛಿದ್ರ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಡಿಸೆಂಬರ್‌ಗೆ ಸಿದ್ದರಾಮಮಯ್ಯ ಕೆಳಗಿಳಿಯುತ್ತಾರೆ
ನಾನು ಸಿಎಂ ಸಿದ್ದರಾಮಯ್ಯ ಅವರನ್ನ ಹತ್ತಿರದಿಂದ ತಿಳಿದಿದ್ದೇನೆ. ಸಿದ್ದರಾಮಯ್ಯ ಬೇರೆ ರಾಜಕಾರಣಿಗಳಂತಲ್ಲ. ಜಾತಿಗಣತಿ ವರದಿ ಸಮಿತಿಯೇ ಜನರ ಕಣ್ಣೊರೆಸುವ ಸಮಿತಿಯಾಗಿದೆ. ಈ ಜಾತಿ ಜನಗಣತಿ ಜಾರಿಯೂ ಆಗಲ್ಲ, ಏನೂ ಆಗಲ್ಲ. ಡಿಸೆಂಬರ್‌ಗೆ ಸಿಎಂ ಸಿದ್ದರಾಮಯ್ಯ ಕೆಳಗಿಳಿಯುತ್ತಾರೆ.

ಇದನ್ನೂ ಓದಿ:- ಜಾತಿಗಣತಿ ವರದಿ ತಿರಸ್ಕರಿಸಿ: ಸಿಎಂ ಸಿದ್ದುಗೆ ಶೋಭಾ ಕರಂದ್ಲಾಜೆ ಪತ್ರ

ಸಮಾಜದಲ್ಲಿ ಹಿಂದುಳಿದ ಸಮುದಾಯಗಳನ್ನು ಗುರ್ತಿಸಿ ಅವರಿಗೆ ವಿಶೇಷ ಸವಲತ್ತುಗಳನ್ನು ನೀಡಿ ಮೇಲೆತ್ತುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸುವುದು. ಈಗೀನ ವರದಿ ಅವಜ್ಞಾನಿಕ. ಬೇಕಾದರೆ ವೈಜ್ಞಾನಿಕ ಸಮೀಕ್ಷೆ ಮಾಡಿ ಅನುಷ್ಠಾನಕ್ಕೆ ತನ್ನಿ ಎಂದರು.

ಗ್ಯಾರಂಟಿಯಿಂದ ರಾಜ್ಯ ದಿವಾಳಿ
ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿದೆ. ಸರ್ಕಾರದ ಬಳಿ ಹಣ ಇಲ್ಲ. ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಮಹಿಳೆಯರಿಗೆ ಕೊಟ್ಟು ಅವಳ ಗಂಡನ ಹತ್ತಿರ ಡಬಲ್ ಕಿತ್ತುಕೊಳ್ಳುತ್ತಿದ್ದಾರೆ. ಸರ್ಕಾರ ಆರ್ಥಿಕ ನೀತಿಗಳನ್ನು ಜಾರಿಗೆ ತರುವಲ್ಲಿ ಎಡವಿದೆ ಎಂದರು.

ಇದನ್ನೂ ಓದಿ:- Caste Census Report; ಸಂಪುಟ ಸಭೆಯಲ್ಲಿ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಮದ್ಯ ಬೆಲೆ ಹೆಚ್ಚು ಮಾಡಿ ಆದರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಯಾಕೆ ಮಾಡುತ್ತೀರಿ.? ಇದೆಲ್ಲ ಡೈವರ್ಟ್ ಮಾಡುವ ಕೆಲಸ. ಒಂದು ವೇಳೆ ಮಹಾತ್ಮ ಗಾಂಧಿಜೀ ಇದ್ದಿದ್ದರೆ ಬ್ರಿಟೀಷರನ್ನ ವಾಪಸ್ ಕರೆತರುತಿದ್ದರು ಎಂದು ಪರಸ್ಪರ ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಎಂಎಲ್ಸಿ ಮಂಜೇಗೌಡ ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…

39 mins ago

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

60 mins ago

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

2 hours ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

2 hours ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

3 hours ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

3 hours ago