ಮೈಸೂರು

ಜಾತಿ ಜನಗಣತಿ | ಮುಂದಿನ ಸಭೆಯು ವಿಫಲವಾಗಲಿದೆ ; ಎಂಎಲ್‌ಸಿ ಮಂಜೇಗೌಡ (MLC Manjegowda)

ಮೈಸೂರು : ಜಾತಿ ಜನಗಣತಿ ವರದಿ ಬಗ್ಗೆ ಗುರುವಾರ (Thursday) ಸಿಎಂ ಸಿದ್ದರಾಮಯ್ಯ (CM Siddaramaiah) ನಡೆಸಿದ ವಿಶೇಷ ಸಭೆ ವಿಫಲವಾಗಿದೆ. ಹೀಗೆಯೇ ಮೇ.2 ರಂದು ನಡೆಸಲು ನಿಶ್ಚಯಿಸಿರುವ ಸಭೆಯು ಕೂಡ ಸಫಲವಾಗಲ್ಲ ಎಂದು ಎಂಎಲ್‌ಸಿ ಮಂಜೇಗೌಡ (MLC Manjegowda) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವರದಿ ನೂರಕ್ಕೆ ನೂರರಷ್ಟು ಜಾರಿಗೆ ಬರಲ್ಲ. ವರದಿ ಅನುಷ್ಠಾನ ತರಲಿಕ್ಕೆ ಯಾರು ಹೊರಟಿದ್ದಾರೆ ಅವರಿಗೂ ಜಾರಿಗೆ ತರಲಿಕ್ಕೆ ಇಷ್ಟ ಇಲ್ಲ. ಇದೊಂದು ರೀತಿ ಮಗು ಚಿವುಟಿ ತೊಟ್ಟಿಲನ್ನೂ ತೂಗುವ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.

ಹೆಚ್ಚಿನ ಮಾಹಿತಿ:- Caste Census | ವಿಶೇಷ ಸಭೆಯಲ್ಲಿ ಸಹೋದ್ಯೋಗಿಗಳಿಗೆ ಸಿ.ಎಂ ಹೇಳಿದ್ದೇನು?

ರಾಜ್ಯದಲ್ಲಿ ಒಕ್ಕಲಿಗರು, ಲಿಂಗಾಯತರು ಒಬ್ಬರ ಪರವಾಗಿಲ್ಲ. ಎಲ್ಲ ಪಕ್ಷದಲ್ಲೂ ಹೆಚ್ಚೆ ಇದ್ದಾರೆ ಎಂದು ತಿಳಿದಿರುವ ಸಿದ್ದರಾಮಯ್ಯ ಅವರು ರಾಜಕೀಯವಾಗಿ ಸಮುದಾಯವನ್ನು ಛಿದ್ರ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಡಿಸೆಂಬರ್‌ಗೆ ಸಿದ್ದರಾಮಮಯ್ಯ ಕೆಳಗಿಳಿಯುತ್ತಾರೆ
ನಾನು ಸಿಎಂ ಸಿದ್ದರಾಮಯ್ಯ ಅವರನ್ನ ಹತ್ತಿರದಿಂದ ತಿಳಿದಿದ್ದೇನೆ. ಸಿದ್ದರಾಮಯ್ಯ ಬೇರೆ ರಾಜಕಾರಣಿಗಳಂತಲ್ಲ. ಜಾತಿಗಣತಿ ವರದಿ ಸಮಿತಿಯೇ ಜನರ ಕಣ್ಣೊರೆಸುವ ಸಮಿತಿಯಾಗಿದೆ. ಈ ಜಾತಿ ಜನಗಣತಿ ಜಾರಿಯೂ ಆಗಲ್ಲ, ಏನೂ ಆಗಲ್ಲ. ಡಿಸೆಂಬರ್‌ಗೆ ಸಿಎಂ ಸಿದ್ದರಾಮಯ್ಯ ಕೆಳಗಿಳಿಯುತ್ತಾರೆ.

ಇದನ್ನೂ ಓದಿ:- ಜಾತಿಗಣತಿ ವರದಿ ತಿರಸ್ಕರಿಸಿ: ಸಿಎಂ ಸಿದ್ದುಗೆ ಶೋಭಾ ಕರಂದ್ಲಾಜೆ ಪತ್ರ

ಸಮಾಜದಲ್ಲಿ ಹಿಂದುಳಿದ ಸಮುದಾಯಗಳನ್ನು ಗುರ್ತಿಸಿ ಅವರಿಗೆ ವಿಶೇಷ ಸವಲತ್ತುಗಳನ್ನು ನೀಡಿ ಮೇಲೆತ್ತುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸುವುದು. ಈಗೀನ ವರದಿ ಅವಜ್ಞಾನಿಕ. ಬೇಕಾದರೆ ವೈಜ್ಞಾನಿಕ ಸಮೀಕ್ಷೆ ಮಾಡಿ ಅನುಷ್ಠಾನಕ್ಕೆ ತನ್ನಿ ಎಂದರು.

ಗ್ಯಾರಂಟಿಯಿಂದ ರಾಜ್ಯ ದಿವಾಳಿ
ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿದೆ. ಸರ್ಕಾರದ ಬಳಿ ಹಣ ಇಲ್ಲ. ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಮಹಿಳೆಯರಿಗೆ ಕೊಟ್ಟು ಅವಳ ಗಂಡನ ಹತ್ತಿರ ಡಬಲ್ ಕಿತ್ತುಕೊಳ್ಳುತ್ತಿದ್ದಾರೆ. ಸರ್ಕಾರ ಆರ್ಥಿಕ ನೀತಿಗಳನ್ನು ಜಾರಿಗೆ ತರುವಲ್ಲಿ ಎಡವಿದೆ ಎಂದರು.

ಇದನ್ನೂ ಓದಿ:- Caste Census Report; ಸಂಪುಟ ಸಭೆಯಲ್ಲಿ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಮದ್ಯ ಬೆಲೆ ಹೆಚ್ಚು ಮಾಡಿ ಆದರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಯಾಕೆ ಮಾಡುತ್ತೀರಿ.? ಇದೆಲ್ಲ ಡೈವರ್ಟ್ ಮಾಡುವ ಕೆಲಸ. ಒಂದು ವೇಳೆ ಮಹಾತ್ಮ ಗಾಂಧಿಜೀ ಇದ್ದಿದ್ದರೆ ಬ್ರಿಟೀಷರನ್ನ ವಾಪಸ್ ಕರೆತರುತಿದ್ದರು ಎಂದು ಪರಸ್ಪರ ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಎಂಎಲ್ಸಿ ಮಂಜೇಗೌಡ ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ: ಕಬಿನಿ ಜಲಾಶಯದ ಒಳಹರಿವು ಹೆಚ್ಚಳ

ಎಚ್‌.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ…

26 mins ago

ಇಂದಿನಿಂದ 6 ದಿನ ಪ್ರಧಾನಿ ಮೋದಿ ವಿದೇಶ ಪ್ರವಾಸ

ನವದೆಹಲಿ: ಇಂದಿನಿಂದ ಆರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಈ…

35 mins ago

ಅಷ್ಟಾಂಗ ಯೋಗದ ರಾಜಧಾನಿ ಮೈಸೂರು

ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…

3 hours ago

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಬಿಎಸ್‌ವೈಗೆ ಲಿಂಗಾಯತ ಶಕ್ತಿಯದ್ದೇ ಚಿಂತೆ

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…

4 hours ago

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

7 hours ago