ಮೈಸೂರು

ಜಾತಿ ಜನಗಣತಿ | ಮುಂದಿನ ಸಭೆಯು ವಿಫಲವಾಗಲಿದೆ ; ಎಂಎಲ್‌ಸಿ ಮಂಜೇಗೌಡ (MLC Manjegowda)

ಮೈಸೂರು : ಜಾತಿ ಜನಗಣತಿ ವರದಿ ಬಗ್ಗೆ ಗುರುವಾರ (Thursday) ಸಿಎಂ ಸಿದ್ದರಾಮಯ್ಯ (CM Siddaramaiah) ನಡೆಸಿದ ವಿಶೇಷ ಸಭೆ ವಿಫಲವಾಗಿದೆ. ಹೀಗೆಯೇ ಮೇ.2 ರಂದು ನಡೆಸಲು ನಿಶ್ಚಯಿಸಿರುವ ಸಭೆಯು ಕೂಡ ಸಫಲವಾಗಲ್ಲ ಎಂದು ಎಂಎಲ್‌ಸಿ ಮಂಜೇಗೌಡ (MLC Manjegowda) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವರದಿ ನೂರಕ್ಕೆ ನೂರರಷ್ಟು ಜಾರಿಗೆ ಬರಲ್ಲ. ವರದಿ ಅನುಷ್ಠಾನ ತರಲಿಕ್ಕೆ ಯಾರು ಹೊರಟಿದ್ದಾರೆ ಅವರಿಗೂ ಜಾರಿಗೆ ತರಲಿಕ್ಕೆ ಇಷ್ಟ ಇಲ್ಲ. ಇದೊಂದು ರೀತಿ ಮಗು ಚಿವುಟಿ ತೊಟ್ಟಿಲನ್ನೂ ತೂಗುವ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.

ಹೆಚ್ಚಿನ ಮಾಹಿತಿ:- Caste Census | ವಿಶೇಷ ಸಭೆಯಲ್ಲಿ ಸಹೋದ್ಯೋಗಿಗಳಿಗೆ ಸಿ.ಎಂ ಹೇಳಿದ್ದೇನು?

ರಾಜ್ಯದಲ್ಲಿ ಒಕ್ಕಲಿಗರು, ಲಿಂಗಾಯತರು ಒಬ್ಬರ ಪರವಾಗಿಲ್ಲ. ಎಲ್ಲ ಪಕ್ಷದಲ್ಲೂ ಹೆಚ್ಚೆ ಇದ್ದಾರೆ ಎಂದು ತಿಳಿದಿರುವ ಸಿದ್ದರಾಮಯ್ಯ ಅವರು ರಾಜಕೀಯವಾಗಿ ಸಮುದಾಯವನ್ನು ಛಿದ್ರ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಡಿಸೆಂಬರ್‌ಗೆ ಸಿದ್ದರಾಮಮಯ್ಯ ಕೆಳಗಿಳಿಯುತ್ತಾರೆ
ನಾನು ಸಿಎಂ ಸಿದ್ದರಾಮಯ್ಯ ಅವರನ್ನ ಹತ್ತಿರದಿಂದ ತಿಳಿದಿದ್ದೇನೆ. ಸಿದ್ದರಾಮಯ್ಯ ಬೇರೆ ರಾಜಕಾರಣಿಗಳಂತಲ್ಲ. ಜಾತಿಗಣತಿ ವರದಿ ಸಮಿತಿಯೇ ಜನರ ಕಣ್ಣೊರೆಸುವ ಸಮಿತಿಯಾಗಿದೆ. ಈ ಜಾತಿ ಜನಗಣತಿ ಜಾರಿಯೂ ಆಗಲ್ಲ, ಏನೂ ಆಗಲ್ಲ. ಡಿಸೆಂಬರ್‌ಗೆ ಸಿಎಂ ಸಿದ್ದರಾಮಯ್ಯ ಕೆಳಗಿಳಿಯುತ್ತಾರೆ.

ಇದನ್ನೂ ಓದಿ:- ಜಾತಿಗಣತಿ ವರದಿ ತಿರಸ್ಕರಿಸಿ: ಸಿಎಂ ಸಿದ್ದುಗೆ ಶೋಭಾ ಕರಂದ್ಲಾಜೆ ಪತ್ರ

ಸಮಾಜದಲ್ಲಿ ಹಿಂದುಳಿದ ಸಮುದಾಯಗಳನ್ನು ಗುರ್ತಿಸಿ ಅವರಿಗೆ ವಿಶೇಷ ಸವಲತ್ತುಗಳನ್ನು ನೀಡಿ ಮೇಲೆತ್ತುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸುವುದು. ಈಗೀನ ವರದಿ ಅವಜ್ಞಾನಿಕ. ಬೇಕಾದರೆ ವೈಜ್ಞಾನಿಕ ಸಮೀಕ್ಷೆ ಮಾಡಿ ಅನುಷ್ಠಾನಕ್ಕೆ ತನ್ನಿ ಎಂದರು.

ಗ್ಯಾರಂಟಿಯಿಂದ ರಾಜ್ಯ ದಿವಾಳಿ
ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿದೆ. ಸರ್ಕಾರದ ಬಳಿ ಹಣ ಇಲ್ಲ. ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಮಹಿಳೆಯರಿಗೆ ಕೊಟ್ಟು ಅವಳ ಗಂಡನ ಹತ್ತಿರ ಡಬಲ್ ಕಿತ್ತುಕೊಳ್ಳುತ್ತಿದ್ದಾರೆ. ಸರ್ಕಾರ ಆರ್ಥಿಕ ನೀತಿಗಳನ್ನು ಜಾರಿಗೆ ತರುವಲ್ಲಿ ಎಡವಿದೆ ಎಂದರು.

ಇದನ್ನೂ ಓದಿ:- Caste Census Report; ಸಂಪುಟ ಸಭೆಯಲ್ಲಿ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಮದ್ಯ ಬೆಲೆ ಹೆಚ್ಚು ಮಾಡಿ ಆದರೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಯಾಕೆ ಮಾಡುತ್ತೀರಿ.? ಇದೆಲ್ಲ ಡೈವರ್ಟ್ ಮಾಡುವ ಕೆಲಸ. ಒಂದು ವೇಳೆ ಮಹಾತ್ಮ ಗಾಂಧಿಜೀ ಇದ್ದಿದ್ದರೆ ಬ್ರಿಟೀಷರನ್ನ ವಾಪಸ್ ಕರೆತರುತಿದ್ದರು ಎಂದು ಪರಸ್ಪರ ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಎಂಎಲ್ಸಿ ಮಂಜೇಗೌಡ ಬೇಸರ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

5 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

6 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

8 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago