ಮೈಸೂರು

ಯುದುವೀರ್‌ ಅವಿರೋಧ ಆಯ್ಕೆಯಾಗಬೇಕು ಎಂದ ವಿಶ್ವನಾಥ್‌ ಕುರಿತು ಲಕ್ಷ್ಮಣ್‌ ಪ್ರತಿಕ್ರಿಯೆ

ಮೈಸೂರು: ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಲಕ್ಷ್ಮಣ್‌ ಹಾಗೂ ಬಿಜೆಪಿಯಿಂದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಣಕ್ಕಿಳಿದಿದ್ದಾರೆ. ಸದ್ಯ ಈ ಇಬ್ಬರೂ ಅಭ್ಯರ್ಥಿಗಳು ಪ್ರಚಾರ ಕಾರ್ಯಗಳಲ್ಲಿ ನಿರತರಾಗಿದ್ದು, ನಿನ್ನೆ ( ಏಪ್ರಿಲ್‌ 3 ) ಹೆಚ್‌ ವಿಶ್ವನಾಥ್‌ ಇಬ್ಬರ ನಡುವಿನ ಸ್ಪರ್ಧೆಯ ಬಗ್ಗೆ ಮಾತನಾಡಿ ಯದುವೀರ್‌ ಅವಿರೋಧ ಆಯ್ಕೆಯಾಗಬೇಕು ಎಂದಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಲಕ್ಷ್ಮಣ್‌ ʼಹೆಚ್‌ ವಿಶ್ವನಾಥ್‌ ಈಗಾಗಲೇ ಬಿಜೆಪಿಯಿಂದ ಎಂಎಲ್‌ಸಿ ಆಗಿದ್ದಾರೆ. ಅವರು ಬಿಜೆಪಿ ಪಕ್ಷದವರು. ಅವರ ಅಭ್ಯರ್ಥಿ ಪರ ನಿಲ್ಲುವುದು ಸಹಜ. ಅವರು ನಮ್ಮ ಪಕ್ಷದವರಲ್ಲ ಹಾಗಾಗಿ ಅದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ನನ್ನ ಪರವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಹಗಲಿರುಳು ಎನ್ನದೇ ಶ್ರಮಿಸುತ್ತಿದ್ದಾರೆ. ನಮ್ಮ ಸರ್ಕಾರದ ಯೋಜನೆಗಳು ಹಾಗೂ ಜನಪರ ಆಡಳಿತ ನನ್ನ ಕೈಹಿಡಿಯಲಿವೆ ಎಂಬ ನಂಬಿಕೆ ಇದೆʼ ಎಂದು ಲಕ್ಷ್ಮಣ್‌ ಹೇಳಿದರು.

ಹೆಚ್‌ ವಿಶ್ವನಾಥ್‌ ಏನು ಹೇಳಿದ್ದರು?

ʼರಾಜಪ್ರಭುತ್ವದ‌ ಕುಡಿ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಲು ಸ್ಪರ್ಧಿಸಿದ್ದಾರೆ. ಯದುವೀರ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್‌ಗೆ ಇನ್ನೂ ಕಾಲ ಮಿಂಚಿಲ್ಲ. ಅನ್ನ, ಅಕ್ಷರ, ಆರೋಗ್ಯ ಕೊಟ್ಟ ಯದುವಂಶಕ್ಕೆ ಗೌರವ ಕೊಟ್ಟು ಯದುವೀರ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕುʼ ಎಂದು ಹೆಚ್‌ ವಿಶ್ವನಾಥ್‌ ಹೇಳಿದ್ದರು.

andolana

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

5 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

6 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

6 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

7 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

7 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

8 hours ago