ಮೈಸೂರು

ಚೆಕ್‌ಬೌನ್ಸ್‌ ಪ್ರಕರಣ| ಸ್ನೇಹಮಯಿ ಕೃಷ್ಣರನ್ನುಪೊಲೀಸರು ಬಂಧಿಸಬೇಕು: ಎಂ.ಲಕ್ಷ್ಮಣ್‌

ಮೈಸೂರು: ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ. ಪೊಲೀಸರು ಅವರನ್ನು ತಕ್ಷಣವೇ ಬಂಧಿಸಬೇಕು, ಇಲ್ಲವಾದರೆ  ಆಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಎಚ್ಚರಿಕೆ ನೀಡಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಜನವರಿ.31 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆ ನೀಡಿದೆ. ಇದನ್ನ ನಾವು ಹೇಳಿದ್ರೆ ನಮ್ಮ ವಿರುದ್ಧವೇ ತಿರುಗಿ ಬೀಳುತ್ತಾರೆ. ಸ್ನೇಹಮಯಿ ಕೃಷ್ಣರನ್ನ ಪೊಲೀಸರು ಬಂಧಿಸಬೇಕು. ಸ್ನೇಹಮಯಿ ಕೃಷ್ಣ ವಿರುದ್ಧ ಸಾಫ್ಟ್ ಕಾರ್ನರ್ ಬೇಡ. ಸ್ನೇಹಮಯಿ ಕೃಷ್ಣ ಬಂಧಿಸುವಲ್ಲಿ ಪೊಲೀಸ್ ನವರು ಹಿಂದೇಟು ಹಾಕಿದರೆ ಕಮಿಷನರ್ ಕಚೇರಿ ಮುಂದೆ ಆಹೋರಾತ್ರಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲದಿದ್ದರೂ ಸಹ ಅವರನ್ನು ತಪ್ಪಿತಸ್ಥರಂತೆ ಬಿಂಬಿಸಲು ಹೊರಟಿರುವ ಇಡಿ ವಿರುದ್ಧ ಕಾಂಗ್ರೆಸ್ ಪಕ್ಷ ಬೃಹತ್ ಹೋರಾಟ ನಡೆಸಲಿದೆ. ಇ.ಡಿ. ಸಂಸ್ಥೆ ಸುಮಾರು 104 ಪುಟಗಳ ವರದಿಯನ್ನು ಲೋಕಾಯುಕ್ತ ಎಡಿಜಿಪಿಗೆ ಸಲ್ಲಿಕೆ ಮಾಡಿದ್ದಾರೆ. ಆದರೆ ಈ ವರದಿಯನ್ನು ಕೆಲ ಮಾಧ್ಯಮಗಳಿಗೆ ಮಾತ್ರ ನೀಡಿದ್ದಾರೆ. ಇದರ ಹುನ್ನಾರವೇನು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಡಿ ಅಧಿಕಾರಿಗಳು ತಮ್ಮ ವರದಿಯಲ್ಲಿ ಹಸಿ ಸುಳ್ಳು ಆಪಾದನೆ ವಾಡಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಪಕ್ಷದ ಒತ್ತಾಯದಿಂದ ಇಂತಹ ಸುಳ್ಳು ವರದಿಯನ್ನು ಲೋಕಾಯುಕ್ತಕ್ಕೆ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. ಹಣದ ವಹಿವಾಟಿನಲ್ಲಿ ವ್ಯತ್ಯಾಸ ಕಂಡುಬಂದರೆ ಹಾಗೂ ಮನಿ ಲಾಂಡ್ರಿಂಗ್ ನಡೆದಿದೆ ಎಂದು ನ್ಯಾಯಾಲಯಲು ಸೂಚಿಸಿದರೆ ಮಾತ್ರ ಇಡಿ ತನಿಖೆಯನ್ನು ಕೈಗೊಳ್ಳಬೇಕು. ಆದರೆ ಮುಡಾ ಪ್ರಕರಣದಲ್ಲಿ ಇಡಿ ತನಿಖೆ ಮಾಡಲು ಅವಕಾಶವೇ ಇಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಉದ್ದೇಶ ಪೂರ್ವಕವಾಗಿ ಬಿಜೆಪಿ ಇಡಿ ಮೂಲಕ ತನಿಖೆ ಮಾಡಿಸಿದೆ ಎಂದು ಆರೋಪಿಸಿದರು.

ಇನ್ನೂ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು 56 ಕೋಟಿ ರೂ. ಮೌಲ್ಯದ ಜಾಗವನ್ನು ಮುಡಾದಿಂದ ಪಡೆಯಲಾಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಹೀಗಿದ್ದರೂ ವಿಜಯನಗರ 3ನೇ ವಿಜಯನಗರದ 3ನೇ ಹಂತದಲ್ಲಿ ಚದರ ಅಡಿಗೆ 12 ಸಾವಿರ ರೂ.ಮೌಲ್ಯವಿದೆ ಎಂದರು.

ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆಯೂ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಇದೀಗ ಇ.ಡಿ. ಸಂಸ್ಥೆಯೂ ತನ್ನ ವರದಿಯನ್ನು ನ್ಯಾಯಾಲಯಕ್ಕೆ ನೀಡಿದೆ. ಹೀಗಾಗಿ ಈ ಎರಡು ವರದಿಗಳನ್ನು ಪರಿಶೀಲಿಸಿ ಮೂರನೇ ಅಥವಾ ಬದಲಿ ತನಿಖೆಗೆ ಆದೇಶಿಸುವ ನಿಟ್ಟಿನಲ್ಲಿ ಆಗಬಾರದು. ಈ ಮೂಲಕ ಬಿಜೆಪಿ ಅವರು ಹಾಗೂ ಆರ್‌ಎಸ್‌ಎಸ್ ಈ ತನಿಖೆಯನ್ನು ಸಿಬಿಐಗೆ ವಹಿಸಬಹುದೆಂಬ ಹುನ್ನಾರವಾಗಿದೆ ಎಂದು ಆರೋಪಿಸಿದರು.

ಮುಡಾ ಕಚೇರಿಯಲ್ಲಿ ಹಗರಣ ನಡೆದಿರುವುದು ಮಾರ್ಚ್‌ 2022 ರಿಂದ ಮೇ 2023ರಲ್ಲಿ ಅವಧಿಯಲ್ಲಿ, ಈ ಕಾಲದಲ್ಲಿಯೇ ಶೇ.70ರಷ್ಟು ನಿವೇಶನಗಳು ನೋಂದಣಿ ಆಗಿರುವುದು. ಆ ಸಂದರ್ಭದಲ್ಲಿ ಬಿಜೆಪಿ ಪಕ್ಷ ಹಾಗೂ ಬಸವರಾಜ ಬೊವ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದರು. ಹೀಗಾಗಿ ಅವರ ವಿರುದ್ಧ ಇಡಿ ಕ್ರಮ ತೆಗೆದುಕೊಳ್ಳಬೇಕು ಎಂದರು.

ಇ.ಡಿ. ಸಂಸ್ಥೆ ಇಲ್ಲಿಯವರೆಗೂ 7083 ಪ್ರಕರಣಗಳನ್ನು ದಾಖಲು ಮಾಡಿದೆ. ಅವುಗಳಲ್ಲಿ ದೂರು ಸಾಬೀತಾಗಿರುವುದು ಮಾತ್ರ 43 ಪ್ರಕರಣಗಳಲ್ಲಿ ಅಷ್ಟೇ. ಇ.ಡಿ. ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸೇರಿಕೊಂಡು ವಿರೋಧ ಪಕ್ಷಗಳನ್ನು ಬೆದರಿಸುವ ದಾಳವನ್ನಾಗಿ ಈ ಬಳಸುತ್ತಿದೆ. ಅಲ್ಲದೇ ಇಡಿ ದಾಖಲಿಸಿರುವ ಶೇ.90 ರಷ್ಟು ಪ್ರಕರಣಗಳು ವಿರೋಧ ಪಕ್ಷದ ಮುಖಂಡರ ಮೇಲೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

7 mins ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

15 mins ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

51 mins ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

2 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

2 hours ago