ಮೈಸೂರು

ಸುಳ್ಳು ಪ್ರಕರಣ ತನಿಖೆಯಲ್ಲಿ ಇಡಿ ಕಾಲಹರಣ: ಎಂ.ಲಕ್ಷ್ಮಣ್‌

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸುಳ್ಳು ಪ್ರಕರಣವಾಗಿದ್ದು, ಇಡಿ ತನಿಖೆಯಲ್ಲಿ ಅಧಿಕಾರಿಗಳು ನಿರಂತರವಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದ ದಿ ಇನ್ಸ್‌ಟಿಟ್ಯೂಟ್‌ ಆಫ್‌ ಇಂಜಿನಿಯರ್ಸ್‌ ಸಭಾಂಗಣದಲ್ಲಿ ಇಂದು(ಡಿ.3) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಏನಾದರೂ ಮಾಡಿ ಸಿಕ್ಕಿ ಹಾಕಿಸುವ ಪ್ರಯತ್ನಕ್ಕೆ ಬಿಜೆಪಿ ಪಕ್ಷ ಹುನ್ನಾರ ನಡೆಸುತ್ತಿದೆ. ಆದರೆ ಇಡಿ ತನಿಖೆಯಲ್ಲಿ ಸಿದ್ದರಾಮಯ್ಯ ಅವರನ್ನು ಸಿಕ್ಕಿ ಹಾಕಿಸಲು ಸಾಧ್ಯವಿಲ್ಲ. ಅದೊಂದು ಸುಳ್ಳು ಪ್ರಕರಣವಾಗಿದ್ದು, ಸಿದ್ದರಾಮಯ್ಯ ವಿರುದ್ಧ ಯಾವ ದಾಖಲೆಗಳು ಸಿಗುವುದಿಲ್ಲ ಎಂದು ಹೇಳಿದ್ದಾರೆ.

ಮುಡಾ ವಿಚಾರವಾಗಿ ಇಡಿ ಅಧಿಕಾರಿಗಳು ನಿರಂತರವಾಗಿ ವಿಧಾನಸೌಧದ ಐಎಎಸ್‌ ಅಧಿಕಾರಿಗಳಿಗೆ ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ಮಾಡುತ್ತಿದ್ದಾರೆ. ಮುಡಾದ 14 ನಿವೇಶನಗಳಲ್ಲಿ ಸರಿಯಾದ ಸಾಕ್ಷ್ಯಾಧಾರ ಸಿಗದಿದ್ದರೆ ಏಕೆ ಕಾಲಹರಣ ಮಾಡಬೇಕು? ಇಡಿ ಅಧಿಕಾರಿಗಳು ಇನ್ನು ಎಷ್ಟು ದಿನಗಳ ಕಾಲ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರದ್ದು ತಪ್ಪಿದೆಯೋ ಅಥವಾ ಸರಿ ಇದೆಯೋ ಎಂಬುದನ್ನು ತಿಳಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಅವರು ಪ್ರತಿನಿತ್ಯ ಮಾಧ್ಯಮದ ಮೂಲಕ ಸಿದ್ದರಾಮಯ್ಯ ಹಾಗೂ ಸರ್ಕಾರದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಇಡಿ ಅಧಿಕಾರಿಗಳು ದಿನನಿತ್ಯ ಸರ್ಕಾರಿ ಅಧಿಕಾರಿಗಳಿಗೆ ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

10 mins ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

3 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

4 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

4 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

4 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

4 hours ago