ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸುಳ್ಳು ಪ್ರಕರಣವಾಗಿದ್ದು, ಇಡಿ ತನಿಖೆಯಲ್ಲಿ ಅಧಿಕಾರಿಗಳು ನಿರಂತರವಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.
ನಗರದ ದಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಇಂದು(ಡಿ.3) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಏನಾದರೂ ಮಾಡಿ ಸಿಕ್ಕಿ ಹಾಕಿಸುವ ಪ್ರಯತ್ನಕ್ಕೆ ಬಿಜೆಪಿ ಪಕ್ಷ ಹುನ್ನಾರ ನಡೆಸುತ್ತಿದೆ. ಆದರೆ ಇಡಿ ತನಿಖೆಯಲ್ಲಿ ಸಿದ್ದರಾಮಯ್ಯ ಅವರನ್ನು ಸಿಕ್ಕಿ ಹಾಕಿಸಲು ಸಾಧ್ಯವಿಲ್ಲ. ಅದೊಂದು ಸುಳ್ಳು ಪ್ರಕರಣವಾಗಿದ್ದು, ಸಿದ್ದರಾಮಯ್ಯ ವಿರುದ್ಧ ಯಾವ ದಾಖಲೆಗಳು ಸಿಗುವುದಿಲ್ಲ ಎಂದು ಹೇಳಿದ್ದಾರೆ.
ಮುಡಾ ವಿಚಾರವಾಗಿ ಇಡಿ ಅಧಿಕಾರಿಗಳು ನಿರಂತರವಾಗಿ ವಿಧಾನಸೌಧದ ಐಎಎಸ್ ಅಧಿಕಾರಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಮಾಡುತ್ತಿದ್ದಾರೆ. ಮುಡಾದ 14 ನಿವೇಶನಗಳಲ್ಲಿ ಸರಿಯಾದ ಸಾಕ್ಷ್ಯಾಧಾರ ಸಿಗದಿದ್ದರೆ ಏಕೆ ಕಾಲಹರಣ ಮಾಡಬೇಕು? ಇಡಿ ಅಧಿಕಾರಿಗಳು ಇನ್ನು ಎಷ್ಟು ದಿನಗಳ ಕಾಲ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರದ್ದು ತಪ್ಪಿದೆಯೋ ಅಥವಾ ಸರಿ ಇದೆಯೋ ಎಂಬುದನ್ನು ತಿಳಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಅವರು ಪ್ರತಿನಿತ್ಯ ಮಾಧ್ಯಮದ ಮೂಲಕ ಸಿದ್ದರಾಮಯ್ಯ ಹಾಗೂ ಸರ್ಕಾರದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಇಡಿ ಅಧಿಕಾರಿಗಳು ದಿನನಿತ್ಯ ಸರ್ಕಾರಿ ಅಧಿಕಾರಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸುತ್ತಾರೆ ಎಂದು ಕಿಡಿಕಾರಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…