ಮೈಸೂರು

ಮೀಸಲಾತಿ ನೀಡುವ ಅಧಿಕಾರವಿರುವುದು ಕೇಂದ್ರಕ್ಕೆ ಮಾತ್ರ, ಸಾಮಾನ್ಯ ಜ್ಞಾನವಿಲ್ಲದೇ ಬಿಜೆಪಿಯಿಂದ ಅಪಪ್ರಚಾರ: ಎಂ.ಲಕ್ಷ್ಮಣ್‌

ಮೈಸೂರು: ಮೀಸಲಾತಿ ನೀಡುವ ಅಧಿಕಾರವಿರುವುದು ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ. ಅದನ್ನು ಅರಿಯದೇ ಸಾಮಾನ್ಯ ಜ್ಞಾನವಿಲ್ಲದವರಂತೆ ಪ್ರತಿನಿತ್ಯ ಬಿಜೆಪಿಯವರು ಅಪ್ರಪಚಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಮಾರ್ಚ್.25) ಈ ಬಿಜೆಪಿ ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ಮೂಲ ಸಂವಿಧಾನವನ್ನು ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್‌ ಅವರು ಸಂವಿಧಾನವನ್ನು ರಚನೆ ಮಾಡುವ ವೇಳೆ ಜನ ಸಂಘ ವಿರೋಧಿಸಿತ್ತು. ಆಗ ಸಂವಿಧಾನದಲ್ಲಿ 395 ಪರಿಚ್ಛೇದಗಳಿದ್ದವು. ಆದರೆ ಈಗ 448 ಪರಿಚ್ಛೇದಗಳಿವೆ. ಇಲ್ಲಿವರೆಗೂ 104 ತಿದ್ದುಪಡಿಗಳಾಗಿದ್ದು, ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 70 ತಿದ್ದುಪಡಿ ಆಗಿವೆ. ಇನ್ನುಳಿದ ತಿದ್ದುಪಡಿ ಇತರೇ ಪಕ್ಷಗಳು ಅಧಿಕಾರದಲ್ಲಿದ್ದಾಗ ಆಗಿವೆ ಎಂದು ಹೇಳಿದರು.

ರಾಜ್ಯದಲ್ಲಿ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವುದು ಸಂವಿಧಾನದ ಅಡಿಯಲ್ಲಿ ಬರುವುದಿಲ್ಲ. ಆದರೆ ಎಲ್ಲರಿಗೂ ಶೇ.43% ಮೀಸಲಾತಿ ನೀಡಿದ್ದು, ಅದರಲ್ಲಿ ಶೇ. 4% ಅಲ್ಪಸಂಖ್ಯಾತರಿಗೆ ನೀಡಿದ್ದಾರೆ ಎಂದರು.

ಇನ್ನು ಕೇಂದ್ರದಲ್ಲಿ 400 ಸ್ಥಾನಗಳನ್ನು ಗೆದ್ದರೆ ದೇಶದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಬಿಜೆಪಿಯ ಗೃಹ ಸಚಿವ ಅಮಿತ್‌ ಶಾ ಮತ್ತು ಅನಂತ್‌ ಕುಮಾರ್‌ ಸೇರಿದಂತೆ ಅನೇಕ ನಾಯಕರು. ಅಲ್ಲದೇ ಈಗ 17 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಆ ರಾಜ್ಯಗಳಲ್ಲಿ ಇಂತಹ ಘಟನೆ ನಡೆದರೂ ಬೆಳಕಿಗೆ ಬರೋದಿಲ್ಲ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇಂತಹ ವಾತಾವರಣವನ್ನು ದುರುದ್ದೇಶದಿಂದಲೇ ಸೃಷ್ಟಿ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

2 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

3 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

3 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

3 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

4 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

4 hours ago