ಮೈಸೂರು

ಮೀಸಲಾತಿ ನೀಡುವ ಅಧಿಕಾರವಿರುವುದು ಕೇಂದ್ರಕ್ಕೆ ಮಾತ್ರ, ಸಾಮಾನ್ಯ ಜ್ಞಾನವಿಲ್ಲದೇ ಬಿಜೆಪಿಯಿಂದ ಅಪಪ್ರಚಾರ: ಎಂ.ಲಕ್ಷ್ಮಣ್‌

ಮೈಸೂರು: ಮೀಸಲಾತಿ ನೀಡುವ ಅಧಿಕಾರವಿರುವುದು ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ. ಅದನ್ನು ಅರಿಯದೇ ಸಾಮಾನ್ಯ ಜ್ಞಾನವಿಲ್ಲದವರಂತೆ ಪ್ರತಿನಿತ್ಯ ಬಿಜೆಪಿಯವರು ಅಪ್ರಪಚಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಮಾರ್ಚ್.25) ಈ ಬಿಜೆಪಿ ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ಮೂಲ ಸಂವಿಧಾನವನ್ನು ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್‌ ಅವರು ಸಂವಿಧಾನವನ್ನು ರಚನೆ ಮಾಡುವ ವೇಳೆ ಜನ ಸಂಘ ವಿರೋಧಿಸಿತ್ತು. ಆಗ ಸಂವಿಧಾನದಲ್ಲಿ 395 ಪರಿಚ್ಛೇದಗಳಿದ್ದವು. ಆದರೆ ಈಗ 448 ಪರಿಚ್ಛೇದಗಳಿವೆ. ಇಲ್ಲಿವರೆಗೂ 104 ತಿದ್ದುಪಡಿಗಳಾಗಿದ್ದು, ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 70 ತಿದ್ದುಪಡಿ ಆಗಿವೆ. ಇನ್ನುಳಿದ ತಿದ್ದುಪಡಿ ಇತರೇ ಪಕ್ಷಗಳು ಅಧಿಕಾರದಲ್ಲಿದ್ದಾಗ ಆಗಿವೆ ಎಂದು ಹೇಳಿದರು.

ರಾಜ್ಯದಲ್ಲಿ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವುದು ಸಂವಿಧಾನದ ಅಡಿಯಲ್ಲಿ ಬರುವುದಿಲ್ಲ. ಆದರೆ ಎಲ್ಲರಿಗೂ ಶೇ.43% ಮೀಸಲಾತಿ ನೀಡಿದ್ದು, ಅದರಲ್ಲಿ ಶೇ. 4% ಅಲ್ಪಸಂಖ್ಯಾತರಿಗೆ ನೀಡಿದ್ದಾರೆ ಎಂದರು.

ಇನ್ನು ಕೇಂದ್ರದಲ್ಲಿ 400 ಸ್ಥಾನಗಳನ್ನು ಗೆದ್ದರೆ ದೇಶದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಬಿಜೆಪಿಯ ಗೃಹ ಸಚಿವ ಅಮಿತ್‌ ಶಾ ಮತ್ತು ಅನಂತ್‌ ಕುಮಾರ್‌ ಸೇರಿದಂತೆ ಅನೇಕ ನಾಯಕರು. ಅಲ್ಲದೇ ಈಗ 17 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಆ ರಾಜ್ಯಗಳಲ್ಲಿ ಇಂತಹ ಘಟನೆ ನಡೆದರೂ ಬೆಳಕಿಗೆ ಬರೋದಿಲ್ಲ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇಂತಹ ವಾತಾವರಣವನ್ನು ದುರುದ್ದೇಶದಿಂದಲೇ ಸೃಷ್ಟಿ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್‌ ಪ್ರಮಾಣ ವಚನ ಸ್ವೀಕಾರ

ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…

45 mins ago

ಹನೂರು | ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌ : ತಪ್ಪಿದ ಭಾರಿ ಅನಾಹುತ

ಹನೂರು : ಪಟ್ಟಣದಿಂದ ಹೂಗ್ಯಂಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ರಾಮಪುರ…

1 hour ago

ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ.ರಾಜ್‌ಕುಮಾರ್‌ ಸಮಾಧಿ ಬಗ್ಗೆ ಶುರುವಾಗಿದ್ದ ವಿವಾದ ಸಂಬಂಧ ಇದೀಗ ನಟ ಚೇತನ್‌ ಅಹಿಂಸಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇತ್ತೀಚೆಗಷ್ಟೇ…

3 hours ago

ನನ್ನ ಅಜ್ಜನ ರೀತಿ ಅಜಾತಶತ್ರು ಆಗುತ್ತೇನೆ: ನೂತನ ಶಾಸಕ ಸಮರ್ಥ್‌ ಶಾಮನೂರು

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್‌ ಶಾಮನೂರು ತಮ್ಮ ಗೆಲುವಿನ…

3 hours ago

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

4 hours ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

5 hours ago