ಮೈಸೂರು

ಮೀಸಲಾತಿ ನೀಡುವ ಅಧಿಕಾರವಿರುವುದು ಕೇಂದ್ರಕ್ಕೆ ಮಾತ್ರ, ಸಾಮಾನ್ಯ ಜ್ಞಾನವಿಲ್ಲದೇ ಬಿಜೆಪಿಯಿಂದ ಅಪಪ್ರಚಾರ: ಎಂ.ಲಕ್ಷ್ಮಣ್‌

ಮೈಸೂರು: ಮೀಸಲಾತಿ ನೀಡುವ ಅಧಿಕಾರವಿರುವುದು ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ. ಅದನ್ನು ಅರಿಯದೇ ಸಾಮಾನ್ಯ ಜ್ಞಾನವಿಲ್ಲದವರಂತೆ ಪ್ರತಿನಿತ್ಯ ಬಿಜೆಪಿಯವರು ಅಪ್ರಪಚಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಮಾರ್ಚ್.25) ಈ ಬಿಜೆಪಿ ಆರೋಪಗಳ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ಮೂಲ ಸಂವಿಧಾನವನ್ನು ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್‌ ಅವರು ಸಂವಿಧಾನವನ್ನು ರಚನೆ ಮಾಡುವ ವೇಳೆ ಜನ ಸಂಘ ವಿರೋಧಿಸಿತ್ತು. ಆಗ ಸಂವಿಧಾನದಲ್ಲಿ 395 ಪರಿಚ್ಛೇದಗಳಿದ್ದವು. ಆದರೆ ಈಗ 448 ಪರಿಚ್ಛೇದಗಳಿವೆ. ಇಲ್ಲಿವರೆಗೂ 104 ತಿದ್ದುಪಡಿಗಳಾಗಿದ್ದು, ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 70 ತಿದ್ದುಪಡಿ ಆಗಿವೆ. ಇನ್ನುಳಿದ ತಿದ್ದುಪಡಿ ಇತರೇ ಪಕ್ಷಗಳು ಅಧಿಕಾರದಲ್ಲಿದ್ದಾಗ ಆಗಿವೆ ಎಂದು ಹೇಳಿದರು.

ರಾಜ್ಯದಲ್ಲಿ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವುದು ಸಂವಿಧಾನದ ಅಡಿಯಲ್ಲಿ ಬರುವುದಿಲ್ಲ. ಆದರೆ ಎಲ್ಲರಿಗೂ ಶೇ.43% ಮೀಸಲಾತಿ ನೀಡಿದ್ದು, ಅದರಲ್ಲಿ ಶೇ. 4% ಅಲ್ಪಸಂಖ್ಯಾತರಿಗೆ ನೀಡಿದ್ದಾರೆ ಎಂದರು.

ಇನ್ನು ಕೇಂದ್ರದಲ್ಲಿ 400 ಸ್ಥಾನಗಳನ್ನು ಗೆದ್ದರೆ ದೇಶದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಬಿಜೆಪಿಯ ಗೃಹ ಸಚಿವ ಅಮಿತ್‌ ಶಾ ಮತ್ತು ಅನಂತ್‌ ಕುಮಾರ್‌ ಸೇರಿದಂತೆ ಅನೇಕ ನಾಯಕರು. ಅಲ್ಲದೇ ಈಗ 17 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಆ ರಾಜ್ಯಗಳಲ್ಲಿ ಇಂತಹ ಘಟನೆ ನಡೆದರೂ ಬೆಳಕಿಗೆ ಬರೋದಿಲ್ಲ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಇಂತಹ ವಾತಾವರಣವನ್ನು ದುರುದ್ದೇಶದಿಂದಲೇ ಸೃಷ್ಟಿ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

19 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

19 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

19 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

19 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

19 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

19 hours ago