ಮೈಸೂರು: ಬಿಜೆಪಿ ಅವರ ಮೈಸೂರು ಚಲೋ ಪಾಪದ ಯಾತ್ರೆ ಇಂದಿಗೆ ಅಂತ್ಯಗೊಂಡಿದೆ. ಆ ಮೂಲಕ ಬಿಜೆಪಿಗರ ಮೇಲೆ ಅಂಟಿಕೊಂಡಿದ್ದ ಕೊಳೆಯನ್ನು ಇಂದು ತೊಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಕಟುವಾಗಿ ಟೀಕಿಸಿದರು.
ಮೈಸೂರು ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಅದರ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಮೈಸೂರಿನಲ್ಲಿಂದು ಆಯೋಜಿಸಿದ್ದರು.
ಮೈಸೂರಿನಲ್ಲಿಂದು ನಡೆದ ಕಾರ್ಯಕ್ರಮದ ಬಗ್ಗೆ ಮಾತನಾಡಿರುವ ಎಂ. ಲಕ್ಷ್ಮಣ್, ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಬಿಎಸ್ವೈ ಅವರು ಹೈಕಮಾಂಡ್ ಕೃಪಕಟಾಕ್ಷದಿಂದ ಹೊರಗಿದ್ದಾರೆ. ಇತ್ತ ಅಶೋಕ್ ಅವರು ತಮ್ಮ ಬ್ರೇನ್ ಹಾಗೂ ನಾಲಿಗೆಗೆ ಸಂಬಂಧ ಇಲ್ಲದೇ ಮಾತನಾಡುತ್ತಿದ್ದಾರೆ. ವಿಪಕ್ಷ ನಾಯಕರ ಸ್ಥಾನ ಉಳಿಸಿಕೊಳ್ಳಲು ಬಾಯಿಗೆ ಬಂದಂತೆ ಮಾತನಾಡುತ್ತಿದ್ದೀರಾ. ಸಿಎಂ ಸಿದ್ದರಾಮಯ್ಯ ಹಾಗೂ ನಿಮ್ಮ ಬಳಿಯಿರುವ ಆಸ್ತಿ ಮಾಹಿತಿ ಎಷ್ಟು ಎಂಬುದನ್ನು ತಿಳಿಸಿ ಎಂದು ಕಿಡಿಕಾರಿದರು.
ಮುಡಾದಲ್ಲಿ ಸಿಎಂ ಆಸ್ತಿ ಹೊಂದಿರುವುದಾಗಿ ಬಿಜೆಪಿ ಪುಸ್ತಕ ಬಿಡುಗಡೆ ಮಾಡಿದೆ. ಇದರಲ್ಲಿ ಯಾವೆಲ್ಲಾ ಸೈಟ್ ಅಕ್ರಮವಾಗಿದೆ ಎಂಬುದನ್ನು ಮೊದಲು ತಿಳಿಸಲಿ. ನಾವು ಅಧಿಕಾರಕ್ಕೆ ಬಂದಮೇಲೆ ಮುಡಾ ಹಗರಣ ತನಿಖೆ ಆರಂಭವಾಗಿದ್ದು, ಹೀಗಿರುವಾಗ ಸಿಎಂ ಹಗರಣ ಮಾಡಿರುವುದು ಎಲ್ಲಿಂದ ಬಂತು. ಮೈತ್ರಿ ಸರ್ಕಾ ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…
ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…
ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…
ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…