ಮೈಸೂರು

ಜನಕಲ್ಯಾಣ ಸಮಾವೇಶಕ್ಕೆ ಮೈಸೂರಿನಿಂದ 1300 ಬಸ್‌ ವ್ಯವಸ್ಥೆ: ಎಂ.ಲಕ್ಷ್ಮಣ್‌

ಮೈಸೂರು: ಹಾಸನದಲ್ಲಿ ಡಿಸೆಂಬರ್‌ 5 ರಂದು ನಡೆಯುವ ಜನಕಲ್ಯಾಣ ಸಮಾವೇಶಕ್ಕೆ 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ನಮ್ಮ ನಗರ ಹಾಗೂ ಜಿಲ್ಲೆ ವತಿಯಿಂದ ಸುಮಾರು 1,300 ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ನಗರದ ದಿ ಇನ್ಸ್‌ಟಿಟ್ಯೂಟ್‌ ಆಫ್‌ ಇಂಜಿನಿಯರ್ಸ್‌ ಸಭಾಂಗಣದಲ್ಲಿ ಇಂದು(ಡಿ.3) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು(ಡಿ.5) ನಡೆಯಲಿರುವ ಸ್ವಾಭಿಮಾನಿ ಸಮಾವೇಶಕ್ಕೆ ಜನಕಲ್ಯಾಣ ಸಮಾವೇಶವೆಂದು ಕರೆಯಲಾಗಿದೆ. ಈ ಸಮಾವೇಶಕ್ಕೆ ಹಾಸನ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಂದ 3 ಲಕ್ಷ ಜನ ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಕಾಂಗ್ರೆಸ್‌ನ ಕಾರ್ಯಕರ್ತರು ಹಾಸನಕ್ಕೆ ತೆರಳಲು ಮೈಸೂರು ನಗರ ಮತ್ತು ಜಿಲ್ಲೆಯಿಂದ 1,300 ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಯಾಕೆ ಸಮಾವೇಶ ನಡೆಸಲಾಗುತ್ತಿದೆ ಎಂಬ ಪ್ರಶ್ನೆ ಕೇಳುತ್ತಿದ್ದಾರೆ. ಈ ಬಗ್ಗೆ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಉತ್ತರಿಸಲಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಅನುದಾನ ಕಡಿತ ಮಾಡಿರುವ ಕುರಿತು ಜನರಿಗೆ ತಿಳಿಸುವ ಸಮಾವೇಶವಾಗಿದೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಾಗಿರುವ ಶ್ರೀವತ್ಸ ಅವರ ಕ್ಷೇತ್ರದಲ್ಲಿ ವಕ್ಫ್‌ ಮಂಡಳಿಯಿಂದ 25 ವರ್ಷದ ಹಿಂದೆಯೇ ಸರ್ವೇ ನಂಬರ್‌ 153 ರಲ್ಲಿ 2 ಎಕರೆ ಜಮೀನು ಒತ್ತುವರಿಯಾಗಿದೆ. ಅಲ್ಲಿಯ ಜನತೆಗೆ ನೋಟಿಸ್‌ ನೀಡಿದ್ದು ಮಾಜಿ ಸಿಎಂ ಯಡಿಯೂರಪ್ಪಅವರು ಮುಖ್ಯಮಂತ್ರಿಯಾಗಿದ್ದಾಗ. ಆದರೆ ಪ್ರಸ್ತುತ ದಿನಗಳಲ್ಲಿ ಶ್ರೀವತ್ಸ ಅವರೇ ಮಾಧ್ಯಮಗಳ ಮುಂದೆ ಬಾಯಿ ಬಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

35 mins ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

1 hour ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

1 hour ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

2 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

3 hours ago