ಮೈಸೂರು: ಹಾಸನದಲ್ಲಿ ಡಿಸೆಂಬರ್ 5 ರಂದು ನಡೆಯುವ ಜನಕಲ್ಯಾಣ ಸಮಾವೇಶಕ್ಕೆ 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ನಮ್ಮ ನಗರ ಹಾಗೂ ಜಿಲ್ಲೆ ವತಿಯಿಂದ ಸುಮಾರು 1,300 ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.
ನಗರದ ದಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಇಂದು(ಡಿ.3) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು(ಡಿ.5) ನಡೆಯಲಿರುವ ಸ್ವಾಭಿಮಾನಿ ಸಮಾವೇಶಕ್ಕೆ ಜನಕಲ್ಯಾಣ ಸಮಾವೇಶವೆಂದು ಕರೆಯಲಾಗಿದೆ. ಈ ಸಮಾವೇಶಕ್ಕೆ ಹಾಸನ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಂದ 3 ಲಕ್ಷ ಜನ ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಕಾಂಗ್ರೆಸ್ನ ಕಾರ್ಯಕರ್ತರು ಹಾಸನಕ್ಕೆ ತೆರಳಲು ಮೈಸೂರು ನಗರ ಮತ್ತು ಜಿಲ್ಲೆಯಿಂದ 1,300 ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಯಾಕೆ ಸಮಾವೇಶ ನಡೆಸಲಾಗುತ್ತಿದೆ ಎಂಬ ಪ್ರಶ್ನೆ ಕೇಳುತ್ತಿದ್ದಾರೆ. ಈ ಬಗ್ಗೆ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉತ್ತರಿಸಲಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ಅನುದಾನ ಕಡಿತ ಮಾಡಿರುವ ಕುರಿತು ಜನರಿಗೆ ತಿಳಿಸುವ ಸಮಾವೇಶವಾಗಿದೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಾಗಿರುವ ಶ್ರೀವತ್ಸ ಅವರ ಕ್ಷೇತ್ರದಲ್ಲಿ ವಕ್ಫ್ ಮಂಡಳಿಯಿಂದ 25 ವರ್ಷದ ಹಿಂದೆಯೇ ಸರ್ವೇ ನಂಬರ್ 153 ರಲ್ಲಿ 2 ಎಕರೆ ಜಮೀನು ಒತ್ತುವರಿಯಾಗಿದೆ. ಅಲ್ಲಿಯ ಜನತೆಗೆ ನೋಟಿಸ್ ನೀಡಿದ್ದು ಮಾಜಿ ಸಿಎಂ ಯಡಿಯೂರಪ್ಪಅವರು ಮುಖ್ಯಮಂತ್ರಿಯಾಗಿದ್ದಾಗ. ಆದರೆ ಪ್ರಸ್ತುತ ದಿನಗಳಲ್ಲಿ ಶ್ರೀವತ್ಸ ಅವರೇ ಮಾಧ್ಯಮಗಳ ಮುಂದೆ ಬಾಯಿ ಬಡೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…