ಮೈಸೂರು

ವಕ್ಫ್ ಬಿಲ್ ಮಂಡನೆ ವಿರುದ್ಧಕಾಂಗ್ರೆಸ್ ದೊಡ್ಡ ಮಟ್ಟದ ಹೋರಾಟ ಮಾಡಲಿದೆ: ಎಂ.ಲಕ್ಷ್ಮಣ್‌

ಮೈಸೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಕ್ಫ್‌ ಬಿಲ್‌ ಮಂಡನೆ ಮಾಡಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ ಹೋರಾಟ ಮಾಡಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ.

ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಇಂದು(ಏಪ್ರಿಲ್‌.9) ವಕ್ಫ್‌ ಬಿಲ್ ಮಂಡನೆ ಮಾಡಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಸುಮಾರು 8.72 ಲಕ್ಷ ರೂ. ಮೌಲ್ಯದ 38 ಲಕ್ಷ ಎಕರೆ ವಕ್ಫ್ ಪ್ರಾಪರ್ಟಿ ಇದೆ. ಅವುಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ 32 ವಕ್ಫ್ ಬೋರ್ಡ್‌ಗಳಿವೆ. ಆದರೆ ವಕ್ಫ್‌ ಆಸ್ತಿಗಳಲ್ಲಿ ಮುಸ್ಲಿಂ ವಕ್ಫ್‌ ಬೋರ್ಡ್ ಆಸ್ತಿಗಳಿಗಿಂತ ಹಿಂದೂ ದೇವಾಲಯಗಳ ಮುಜರಾಯಿ ಇಲಾಖೆಗೆ ಸೇರಿದ ಆಸ್ತಿಗಳೇ ಅಧಿಕವಾಗಿವೆ ಎಂದು ಹೇಳಿದರು.

ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಈ ನಾಲ್ಕು ರಾಜ್ಯಗಳಲ್ಲೇ ಸುಮಾರು 13 ಲಕ್ಷ ಎಕರೆ ಹಿಂದು ದೇವಾಲಯಗಳ ಆಸ್ತಿ ಇದೆ. ಇಲ್ಲೇ ಇಷ್ಟಿದ್ದರೆ, ಇಡೀ ದೇಶಾದ್ಯಂತ ಇನ್ನೆಷ್ಟು ಇರಹುದು ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದರೆ ಬಿಜೆಪಿಯವರ ಪ್ರಮುಖ ಉದ್ದೇಶ ಮುಸಲ್ಮಾನರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಬಿಂಬಿಸುವುದಾಗಿದೆ. ಹೀಗಾಗಿ ವಕ್ಫ್‌ ಬಿಲ್‌ ಮಂಡನೆ ವಿರುದ್ಧ ಹೋರಾಟ ಮಾಡಲಾಗುವುದ. ಆದರೆ ಕಾಂಗ್ರೆಸ್‌ ಪಕ್ಷದಿಂದ ಮುಸಲ್ಮಾನ ಸಮುದಾಯಕ್ಕೆ ಯಾವಾಗಲೂ ಬೆಂಬಲವವಿರುತ್ತದೆ ಎಂದರು.

ಪೌರ ಕಾರ್ಮಿಕರನ್ನು ಮೇ. 1 ರಿಂದ ಖಾಯಂ ಮಾಡುವ ಸಿಎಂ ನಿರ್ಧಾರ ಮಹತ್ವದ ಹೆಜ್ಜೆ

ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರನ್ನು ಮೇ.1 ರಿಂದ ಖಾಯಂ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರರ ನಿರ್ಧಾರದ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಮಹತ್ವದ ಹೆಜ್ಜೆಯಾಗಿದೆ. ಅವರ ಈ ನಿರ್ಧಾರದಿಂದ ರಾಜ್ಯದಲ್ಲಿರುವ ಸುಮಾರು 7 ಲಕ್ಷದಷ್ಟು ಪೌರ ಕಾರ್ಮಿಕರಿಗೆ ಅನುಕೂಲ ಆಗುತ್ತದೆ. ಅಲ್ಲದೇ ಐದಾರು ಸಾವಿರ ಸಂಬಳ ಪಡೆಯುತ್ತಿದ್ದ ಪೌರ ಕಾರ್ಮಿಕರಿಗೆ 50 ಸಾವಿರ ಸಂಬಳ ಬರುತ್ತದೆ. ಹೀಗಾಗಿ ಅವರ ಬದುಕು ಹಸನಾಗಲಿದ್ದು, ಇಂತಹ ಒಂದು ಮಹತ್ತರವಾದ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಕೈಗೊಂಡಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

21 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

21 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

21 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

21 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

21 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

21 hours ago