ಮೈಸೂರು

ಕೇಂದ್ರ ಸರ್ಕಾರ ಇ.ಡಿ ಮೂಲಕ ದಲಿತ ನಾಯಕರನ್ನು ಟಾರ್ಗೆಟ್‌ ಮಾಡಿದೆ : ಲಕ್ಷ್ಮಣ್‌ ಆರೋಪ

ಮೈಸೂರು : ಕೇಂದ್ರದ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯ(ಇ.ಡಿ)ಸೇರಿದಂತೆ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷ ಹಾಗೂ ದಲಿತ ನಾಯಕರನ್ನು ಟಾರ್ಗೆಟ್‌ ಮಾಡುತ್ತಿದೆ ಎಂದು ಕೆ.ಪಿ.ಪಿ.ಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ, ಕೇಂದ್ರ ಸರ್ಕಾರದ ಇಂತಹ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಂಡು ದಲಿತ ಹಾಗೂ ಕಾಂಗ್ರೆಸ್ ಪ್ರಭಾವಿ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ಡಾ.ಪರಮೇಶ್ವರ್ ಅವರು ತಮ್ಮ ತಂದೆ ಕಾಲದಿಂದಲೂ ಶಿಕ್ಷಣ ಸಂಸ್ಥೆ ನಡೆಸುತ್ತಾ ಬಂದಿದ್ದಾರೆ. ಅವರ ಶಿಕ್ಷಣ ಸಂಸ್ಥೆಯಲ್ಲಿ ಏನಾದರೂ ಭ್ರಷ್ಟಾಚಾರ ನಡೆದರೆ ಸಂಬಂಧಿಸಿದ ಶಿಕ್ಷಣ ಇಲಾಖೆ ಮೇಲೆ ತನಿಖೆ ನಡೆಸಬೇಕು. ಇ.ಡಿ ಅವರಿಗೆ ದಾಳಿ ಮಾಡಲು ಅಧಿಕಾರ ಇಲ್ಲ. ಆದರೆ, ಅಧಿಕಾರಿ ದುರ್ಬಳಕೆ ಮಾಡಿಕೊಂಡು ದಾಳಿ ಮಾಡಿಸಿದ್ದಾರೆ. ಬಿಜೆಪಿಗೆ ದಲಿತರನ್ನು ಕಂಡರೆ ಆಗಲ್ಲ. ದಲಿತ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಕಿಡಿಕಾರಿದರು.

ಶೇ.98 ವಿರೋಧ ಪಕ್ಷಗಳೇ ಟಾರ್ಗೆಟ್ ;
ಇಡಿ ದಾಳಿ ಮಾಡಿರುವ ಬಗ್ಗೆ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಇದುವರೆಗೆ ಕೇಂದ್ರ ಸರ್ಕಾರ 28,878 ಇಡಿ ದಾಳಿ ಮಾಡಿದೆ. ಅದರಲ್ಲಿ ಕೇವಲ 992 ಪ್ರಕರಣಗಳಿಗೆ ಮಾತ್ರ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ.
ಶಿಕ್ಷೆ ಆಗಿರುವು ಕೇವಲ 23 ಪ್ರಕರಣಗಳಲ್ಲಿ ಮಾತ್ರ. ಶೇಕಡಾ 98 ಪರ್ಸೆಂಟ್ ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಿದ್ದಾರೆ.

ದಲಿತ ಮುಖಂಡರೇ ಟಾರ್ಗೆಟ್‌ ;
ಏಳೆಂಟು ದಲಿತ ಮುಖಂಡರನ್ನು ಲೀಸ್ಟ್ ಮಾಡಿದ್ದು, ಇವರನ್ನು ಟಾರ್ಗೆಟ್ ಮಾಡಿ ದಾಳಿ‌ ಮಾಡುವ ಸಾಧ್ಯತೆ ‌ಇದೆ. ಜಾತಿ ಗಣತಿ ವರದಿ ಬಂದರೆ ದಲಿತರು ತಮ್ಮ ಪರವಾಗಿ ಇರಲ್ಲ ಅಂತ ಹೀಗೆಲ್ಲಾ ಮಾಡುತ್ತಿದ್ದಾರೆ. ನಾವೆಲ್ಲರೂ ಡಾ. ಪರಮೇಶ್ವರ್ ಜೊತೆಗಿರುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

4 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

11 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

24 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

24 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

24 hours ago