ಮೈಸೂರು: ಜನರು ಕಾಂಗ್ರೆಸ್ನ ಐದು ಗ್ಯಾರಂಟಿ ಯೋಜನೆಗಳನ್ನು ತಿರಸ್ಕರಿಸಿ ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಹೀಗಾಗಿ ಈ ಪಂಚ ಗ್ಯಾರಂಟಿಗಳ ಮರು ಪರಿಶೀಲನೆ ಆಗಲಿ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ. ಲಕ್ಷ್ಮಣ್ ಹೇಳಿದರು.
ಶನಿವಾರ(ಜೂ 8)ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ವ್ಯಂಗ್ಯವಾಗಿ ಟೀಕಿಸಿ, ಗ್ಯಾರಂಟಿಯನ್ನು ರದ್ದು ಮಾಡುವಂತೆ ಒತ್ತಾಯಿಸಿದ್ದಾರೆ. ಜನ ಬಿಜೆಪಿ ಪರ ಮತ ಚಲಾಯಿಸಿದ್ದಾರೆ ಎಂದರೆ ಗ್ಯಾರಂಟಿ ಇಷ್ಟ ಆಗಿಲ್ಲ ಅಂತಲೇ ಅಲ್ವ. ಹೀಗಾಗಿ ಗ್ಯಾರಂಟಿಗಳನ್ನು ನಿಲ್ಲಿಸೋದು ಒಳ್ಳೆಯದು. ಈ ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಅವರು ಮರು ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದರು.