ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಶಾಸಕ ಕೆ.ಹರೀಶ್ ಗೌಡ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ನಗರದ ದೇವರಾಜ ಮಾರುಕಟ್ಟೆಯಲ್ಲಿ ಶುಕ್ರವಾರ ಬೆಳಿಗ್ಗೆ ಮತಾಯಾಚನೆ ಮಾಡಿದರು.
ಮಾರುಕಟ್ಟೆಯ ಪ್ರತಿ ಮಳಿಗೆಗಳಿಗೂ ಭೇಟಿ ನೀಡಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯ ತಿಳಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ವಿನಂತಿ ಮಾಡಿಕೊಂಡರು.
ದೇವರಾಜ ವಾರುಕಟ್ಟೆಯ ವರ್ತಕರ ಸಂಘದ ಅಧ್ಯಕ್ಷ ಮಹದೇವ್ ಅವರು ಶಾಸಕ ಕೆ.ಹರೀಶ್ಗೌಡ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಸನ್ಮಾನಿಸಿ, ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಸಂಪೂರ್ಣ ಬೆಂಬಲ ಕೊಡುವುದಾಗಿ ಆಶ್ವಾಸನೆ ನೀಡಿದರು.
ಮಾರುಕಟ್ಟೆಯ ಪ್ರಮುಖ ಮುಖಂಡರಾದ ಹೇಮಣ್ಣ ಸೇರಿದಂತೆ ಇತರರನ್ನು ಭೇಟಿ ವಾಡಿ ಹೆಚ್ಚಿನ ಬೆಂಬಲ ನೀಡುವಂತೆ ತಿಳಿಸಿದರು.
ದೇವರಾಜ ಮಾರುಕಟ್ಟೆಯ ಅಂಗಡಿಗಳ ವಾಲೀಕರು, ವ್ಯಾಪಾರಿಗಳು ಹಾಗೂ ಸಿಬ್ಬಂದಿ ಐದು ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ನಾವು ಪಡೆದುಕೊಳ್ಳುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಕಾರ್ಯಕ್ರಮಗಳನ್ನು ಒಪ್ಪಿಕೊಂಡಿದ್ದೇವೆ ಹಾಗಾಗಿ ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಬೆಂಬಲಿಸಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸುವುದಾಗಿ ಭರವಸೆ ನೀಡಿದರು.
ಕಾಂಗ್ರೆಸ್ ಮುಖಂಡರಾದ ಎಂ.ಶಿವಣ್ಣ, ಜೆ.ಗೋಪಿ ಮತ್ತು ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…