ಮೈಸೂರು: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರಸ್ ಸಮಿತಿಯ ಪಕ್ಷದ ಡಿ.ಕೆ.ಶಿವಕುವಾರ್ ಅವರ ಆದೇಶದ ಮೇರೆಗೆ ಮದನ್ ಪಟೇಲ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಕಟಣೆಯಲ್ಲಿ ತಿಳಸಲಾಗಿದೆ.
೨೦೨೪ರ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ಬದಲಿಸುವ ಚುನಾವಣೆಯಾಗಿದೆ. ಸಂವಿಧಾನದ ಪೂರ್ವ ಪೀಠಿಕೆಯಲ್ಲಿರುವ ಜ್ಯಾತ್ಯಾತೀತ ಮತ್ತು ಸವಾಜವಾದಿ ತತ್ವಗಳೇ ಬಿಜೆಪಿಗೆ ನುಂಗಲಾರದ ತುತ್ತಾಗಿದೆ.
ಬಿಜೆಪಿ ಪಕ್ಷ ೨೦೧೪ರ ಲೋಕಸಭಾ ಚನಾವಣೆ ಪೂರ್ವದಲ್ಲಿ ಘೋಷಿಸಿದ್ದ ಭ್ರಷ್ಟಾಚಾರ ಮುಕ್ತ ಆಡಳಿತ, ವರ್ಷಕ್ಕೆ ೨ಕೋಟಿ ಉದ್ಯೋಗ ಸೃಷ್ಟಿ, ರೈತರ ಬೆಳೆಗೆ ದ್ವಿಗುಣ ಬೆಲೆ, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ೧೫ ಲಕ್ಷ ಹಾಕುವುದೂ ಸೇರಿದಂತೆ ಯಾವ ಭರವಸೆಯನ್ನೂ ಇದುವರೆಗೆ ಈಡೇರಿಸಿಲ್ಲ.
ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತದ ಫಲವಾಗಿ ಬೆಲೆ ಏರಿಕೆ, ಭ್ರಷ್ಟಾಚಾರ, ಕೋಮುದ್ವೇಷ ದೇಶದ ಜನರ ನೆಮ್ಮದಿಯನ್ನು ಹಾಳುಮಾಡಿದೆ. ಇಂತಹ ಸಂದರ್ಭದಲ್ಲಿ ಈ ಲೋಕಸಭಾ ಚುನಾವಣೆಯಲ್ಲಿ ಕೋಮವಾದಿ ಬಿಜೆಪಿ ಪಕ್ಷವನ್ನು ಸೋಲಿಸಿ, ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರ ಮತ್ತು ಮೈಸೂರು ಕೊಡಗು ಲೋಕಸಭಾ ಕ್ಷೇತ್ರವನ್ನೂ ಒಳಗೊಂಡಂತೆ ಕರ್ನಾಟಕದಲ್ಲಿ ೨೦ಕ್ಕೂ ಹೆಚ್ಚು ಕ್ಷೇತ್ರವನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆ ಆಗಿರುವ ಮದನ್ ಪಟೇಲ್ ಶ್ರಮಿಸುತ್ತಾರೆ ಎಂದು ಪಕ್ಷ ಭಾವಿಸಿದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…