ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್ಮಸ್ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಒಳಗೊಂಡ ಮಾಗಿ ಉತ್ಸವವನ್ನು ಡಿ.21 ರಿಂದ ಆಯೋಜಿಸಲಾಗಿದ್ದು, ಈ ಸಂಬಂಧ ಸಿದ್ದತೆಗಳು ಭರದಿಂದ ಸಾಗಿವೆ.
ಡಿಸೆಂಬರ್ 21 ರಿಂದ 31 ರವರೆಗೆ ಸುಮಾರು 11 ದಿನಗಳ ಕಾಲ ಮಾಗಿ ಉತ್ಸವ ನಡೆಯಲಿದೆ. ಇದಕ್ಕಾಗಿ ಮೈಸೂರು ಅರಮನೆ ಮಂಡಳಿ ವತಿಯಿಂದ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಈ ಮಾಗಿ ಉತ್ಸವಕ್ಕೆ ಶಾಲಾ, ಕಾಲೇಜು ವಿದ್ಯಾರ್ಥಿಗಳು ಪ್ರವಾಸಿಗರನ್ನು ಆಕರ್ಷಿಸಲಿದೆ.
ಈ ಬಾರಿಯ ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನದಲ್ಲಿ ಇತ್ತೀಚೆಗೆ ಸಾವನ್ನಪ್ಪಿದ ಅರ್ಜುನ ಆನೆಯ ಆಕೃತಿ ಪ್ರಮುಖ ಆಕರ್ಷಣಿಯವಾಗಿದೆ. ಇದರ ಜೊತೆಯಲ್ಲಿ ಹಲವು ಕಲಾಕೃತಿಗಳು ಮೂಡುತ್ತಿವೆ.
ಲಕ್ಷಾಂತರ ಅಲಂಕಾರಿಕ ಹೂಗಳನ್ನು ಈ ಉತ್ಸವಕ್ಕೆ ಬಳಕೆ ಮಾಡಲಾಗುತ್ತಿದ್ದು, ಮಲೆ ಮಹದೇಶ್ವರ ಸ್ವಾಮಿ ದೇವಾಲಯ, ಸೋಮನಾಥ ದೇವಾಲಯ, ಹೊಯ್ಸಳ ದೇವಾಲಯ, ಶಿವನ ದೇವಾಲಯಗಳು ಹೂವಿನಲ್ಲಿ ಕಂಗೊಳಿಸಲಿವೆ.
ಮಾಗಿ ಉತ್ಸವದಲ್ಲಿ ಈ ಭಾರಿ ಟಿಕೆಟ್ ದರ ನಿಗದಿ ಮಾಡಲಾಗಿದ್ದು ವಯಸ್ಕರು, ವಿದೇಶಿಗರಿಗೆ 30 ರೂ. ನಿಗದಿ ಮಾಡಲಾಗಿದೆ. ಇನ್ನು 10 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ 20 ರೂ. ಹಾಗೂ 10 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಆದೇಶ ಹೊರಡಿಸಿದೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…