ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್ಮಸ್ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಒಳಗೊಂಡ ಮಾಗಿ ಉತ್ಸವವನ್ನು ಡಿ.21 ರಿಂದ ಆಯೋಜಿಸಲಾಗಿದ್ದು, ಈ ಸಂಬಂಧ ಸಿದ್ದತೆಗಳು ಭರದಿಂದ ಸಾಗಿವೆ.
ಡಿಸೆಂಬರ್ 21 ರಿಂದ 31 ರವರೆಗೆ ಸುಮಾರು 11 ದಿನಗಳ ಕಾಲ ಮಾಗಿ ಉತ್ಸವ ನಡೆಯಲಿದೆ. ಇದಕ್ಕಾಗಿ ಮೈಸೂರು ಅರಮನೆ ಮಂಡಳಿ ವತಿಯಿಂದ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಈ ಮಾಗಿ ಉತ್ಸವಕ್ಕೆ ಶಾಲಾ, ಕಾಲೇಜು ವಿದ್ಯಾರ್ಥಿಗಳು ಪ್ರವಾಸಿಗರನ್ನು ಆಕರ್ಷಿಸಲಿದೆ.
ಈ ಬಾರಿಯ ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನದಲ್ಲಿ ಇತ್ತೀಚೆಗೆ ಸಾವನ್ನಪ್ಪಿದ ಅರ್ಜುನ ಆನೆಯ ಆಕೃತಿ ಪ್ರಮುಖ ಆಕರ್ಷಣಿಯವಾಗಿದೆ. ಇದರ ಜೊತೆಯಲ್ಲಿ ಹಲವು ಕಲಾಕೃತಿಗಳು ಮೂಡುತ್ತಿವೆ.
ಲಕ್ಷಾಂತರ ಅಲಂಕಾರಿಕ ಹೂಗಳನ್ನು ಈ ಉತ್ಸವಕ್ಕೆ ಬಳಕೆ ಮಾಡಲಾಗುತ್ತಿದ್ದು, ಮಲೆ ಮಹದೇಶ್ವರ ಸ್ವಾಮಿ ದೇವಾಲಯ, ಸೋಮನಾಥ ದೇವಾಲಯ, ಹೊಯ್ಸಳ ದೇವಾಲಯ, ಶಿವನ ದೇವಾಲಯಗಳು ಹೂವಿನಲ್ಲಿ ಕಂಗೊಳಿಸಲಿವೆ.
ಮಾಗಿ ಉತ್ಸವದಲ್ಲಿ ಈ ಭಾರಿ ಟಿಕೆಟ್ ದರ ನಿಗದಿ ಮಾಡಲಾಗಿದ್ದು ವಯಸ್ಕರು, ವಿದೇಶಿಗರಿಗೆ 30 ರೂ. ನಿಗದಿ ಮಾಡಲಾಗಿದೆ. ಇನ್ನು 10 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ 20 ರೂ. ಹಾಗೂ 10 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಆದೇಶ ಹೊರಡಿಸಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…