ಮೈಸೂರು

ಮೈಸೂರಲ್ಲಿ ನಾಳೆಯಿಂದ ಮಾಗಿ ಉತ್ಸವ

ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ  ಫಲಪುಷ್ಪ ಪ್ರದರ್ಶನ ಒಳಗೊಂಡ ಮಾಗಿ ಉತ್ಸವವನ್ನು ಡಿ.21 ರಿಂದ ಆಯೋಜಿಸಲಾಗಿದ್ದು, ಈ ಸಂಬಂಧ ಸಿದ್ದತೆಗಳು ಭರದಿಂದ ಸಾಗಿವೆ.

ಡಿಸೆಂಬರ್‌ 21 ರಿಂದ 31 ರವರೆಗೆ ಸುಮಾರು 11 ದಿನಗಳ ಕಾಲ ಮಾಗಿ ಉತ್ಸವ ನಡೆಯಲಿದೆ. ಇದಕ್ಕಾಗಿ ಮೈಸೂರು ಅರಮನೆ ಮಂಡಳಿ ವತಿಯಿಂದ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಈ ಮಾಗಿ ಉತ್ಸವಕ್ಕೆ ಶಾಲಾ, ಕಾಲೇಜು ವಿದ್ಯಾರ್ಥಿಗಳು ಪ್ರವಾಸಿಗರನ್ನು ಆಕರ್ಷಿಸಲಿದೆ.

ಈ ಬಾರಿಯ ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನದಲ್ಲಿ ಇತ್ತೀಚೆಗೆ ಸಾವನ್ನಪ್ಪಿದ ಅರ್ಜುನ ಆನೆಯ ಆಕೃತಿ ಪ್ರಮುಖ ಆಕರ್ಷಣಿಯವಾಗಿದೆ. ಇದರ ಜೊತೆಯಲ್ಲಿ ಹಲವು ಕಲಾಕೃತಿಗಳು ಮೂಡುತ್ತಿವೆ.

ಲಕ್ಷಾಂತರ ಅಲಂಕಾರಿಕ ಹೂಗಳನ್ನು ಈ ಉತ್ಸವಕ್ಕೆ ಬಳಕೆ ಮಾಡಲಾಗುತ್ತಿದ್ದು, ಮಲೆ ಮಹದೇಶ್ವರ ಸ್ವಾಮಿ ದೇವಾಲಯ, ಸೋಮನಾಥ ದೇವಾಲಯ, ಹೊಯ್ಸಳ ದೇವಾಲಯ, ಶಿವನ ದೇವಾಲಯಗಳು ಹೂವಿನಲ್ಲಿ ಕಂಗೊಳಿಸಲಿವೆ.

ಮಾಗಿ ಉತ್ಸವದಲ್ಲಿ ಈ ಭಾರಿ ಟಿಕೆಟ್‌ ದರ ನಿಗದಿ ಮಾಡಲಾಗಿದ್ದು ವಯಸ್ಕರು, ವಿದೇಶಿಗರಿಗೆ 30 ರೂ. ನಿಗದಿ ಮಾಡಲಾಗಿದೆ. ಇನ್ನು 10 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ 20 ರೂ. ಹಾಗೂ 10 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಆದೇಶ ಹೊರಡಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

11 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

11 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

11 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago