ಸರಗೂರು: ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ನಂಜೀಪುರ ಗ್ರಾಮದಲ್ಲಿ ಮಲೆ ಮಹದೇಶ್ವರಸ್ವಾಮಿ ರಥೋತ್ಸವ ಮತ್ತು ಕೊಂಡೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಜಾತ್ರೆಯ ಹಿನ್ನೆಲೆ ಪ್ರತಿ ವರ್ಷದಂತೆ ದೇವಸ್ಥಾನಗಳಿಗೆ ವಿವಿಧ ಬಣ್ಣಗಳನ್ನು ಬಳಿದು ಸಿಂಗರಿಸಲಾಗಿತ್ತು. ವಿದ್ಯುತ್ ದೀಪಾಲಂಕಾರ ಮತ್ತು ಬಗೆ ಬಗೆಯ ಹೂವುಗಳಿಂದ ರಥವನ್ನು ಅಲಂಕೃತಗೊಳಿಸಿ, ಮಧುವಣಗಿತ್ತಿಯಂತೆ ಸಿಂಗರಿಸಲಾಗಿತ್ತು. ರಥದಲ್ಲಿ ಉತ್ಸವ ಮೂರ್ತಿಯನ್ನು ವಿರಾಜಮಾನವಾಗಿ ಕೂರಿಸಿ ಗ್ರಾಮದ ಬೀದಿಗಳಲ್ಲಿ ಜಾನಪದ ಕಲಾ ತಂಡಗಳಾದ ವೀರಗಾಸೆ ಕುಣಿತ, ನಗಾರಿ, ಮಂಗಳ ವಾದ್ಯಗಳು ಮೊಳಗಿ, ಸತ್ತಿಗೆಗಳು ಮೆರವಣಿಗೆಗೆ ಮೆರಗು ನೀಡಿದವು.
ಬೆಳಿಗ್ಗೆಯಿಂದಲೇ ಹೋಮ, ಹವನಗಳು ನಡೆದವು. ದೇವರ ಉತ್ಸವಮೂರ್ತಿಯನ್ನು ನುಗು ನದಿ ದಡಕ್ಕೆ ಕರೆತಂದು ವಿಶೇಷ ಪೂಜೆ ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ದೇವಸ್ಥಾನದ ಬಳಿಗೆ ತರಲಾಯಿತು. ನಂತರ ದೇವಸ್ಥಾನದ ಆವರಣದಲ್ಲಿ ಹಾಕಲಾಗಿದ್ದ ಕೊಂಡೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರು ಕೊಂಡ ಹಾಯುವುದರ ಮೂಲಕ ಭಕ್ತಿಯನ್ನು ಮೆರೆದರು. ನಂತರ ದೇವಸ್ಥಾನದ ಬಳಿ ವೃಕ್ಷ ಪೂಜೆ, ಬಸವ ಪೂಜೆ, ಮಾಡಲಾಯಿತು. ಬಳಿಕ ಭಕ್ತರೆಲ್ಲಾ ಸೇರಿ ಶ್ರೀ ಮಲೈಮಹದೇಶ್ವರಸ್ವಾಮಿ ರಥ ಎಳೆದು ಹರಕೆ ತಿರಿಸಿದರು. ನಂತರ ಅನ್ನ ಸಂತರ್ಪಣೆ ನಡೆಯಿತು.
ಗ್ರಾಮದ ಗೌಡಿಕೆ ಶಿವಮಲ್ಲಪ್ಪ, ಶಿವರಾಜಪ್ಪ ಪ್ರಭುಸ್ವಾಮಿ, ಗುರುಸ್ವಾಮಿ, ಎನ್ ಪಿ.ನಾಗರಾಜಪ್ಪ, ಎನ್.ಪಿ.ಶಿವಣ್ಣ, ಶಿವಕುಮಾರ್, ಶಿಕ್ಷಕರಾದ ಪರಶಿವಮೂರ್ತಿ ಎನ್ ಪಿ, ಮಹೇಶ್, ಕುಮಾರ, ರವಿ, ಮಂಜುನಾಥ, ಮಹದೇವಪ್ಪ, ಸತೀಶ್, ಸುತ್ತಮುತ್ತಲಿನ ಸಹಸ್ರಾರು ಭಕ್ತರು ಭಾಗವಹಿಸಿದ್ದರು.
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…
ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…