ಸರಗೂರು: ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ನಂಜೀಪುರ ಗ್ರಾಮದಲ್ಲಿ ಮಲೆ ಮಹದೇಶ್ವರಸ್ವಾಮಿ ರಥೋತ್ಸವ ಮತ್ತು ಕೊಂಡೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಜಾತ್ರೆಯ ಹಿನ್ನೆಲೆ ಪ್ರತಿ ವರ್ಷದಂತೆ ದೇವಸ್ಥಾನಗಳಿಗೆ ವಿವಿಧ ಬಣ್ಣಗಳನ್ನು ಬಳಿದು ಸಿಂಗರಿಸಲಾಗಿತ್ತು. ವಿದ್ಯುತ್ ದೀಪಾಲಂಕಾರ ಮತ್ತು ಬಗೆ ಬಗೆಯ ಹೂವುಗಳಿಂದ ರಥವನ್ನು ಅಲಂಕೃತಗೊಳಿಸಿ, ಮಧುವಣಗಿತ್ತಿಯಂತೆ ಸಿಂಗರಿಸಲಾಗಿತ್ತು. ರಥದಲ್ಲಿ ಉತ್ಸವ ಮೂರ್ತಿಯನ್ನು ವಿರಾಜಮಾನವಾಗಿ ಕೂರಿಸಿ ಗ್ರಾಮದ ಬೀದಿಗಳಲ್ಲಿ ಜಾನಪದ ಕಲಾ ತಂಡಗಳಾದ ವೀರಗಾಸೆ ಕುಣಿತ, ನಗಾರಿ, ಮಂಗಳ ವಾದ್ಯಗಳು ಮೊಳಗಿ, ಸತ್ತಿಗೆಗಳು ಮೆರವಣಿಗೆಗೆ ಮೆರಗು ನೀಡಿದವು.
ಬೆಳಿಗ್ಗೆಯಿಂದಲೇ ಹೋಮ, ಹವನಗಳು ನಡೆದವು. ದೇವರ ಉತ್ಸವಮೂರ್ತಿಯನ್ನು ನುಗು ನದಿ ದಡಕ್ಕೆ ಕರೆತಂದು ವಿಶೇಷ ಪೂಜೆ ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ದೇವಸ್ಥಾನದ ಬಳಿಗೆ ತರಲಾಯಿತು. ನಂತರ ದೇವಸ್ಥಾನದ ಆವರಣದಲ್ಲಿ ಹಾಕಲಾಗಿದ್ದ ಕೊಂಡೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರು ಕೊಂಡ ಹಾಯುವುದರ ಮೂಲಕ ಭಕ್ತಿಯನ್ನು ಮೆರೆದರು. ನಂತರ ದೇವಸ್ಥಾನದ ಬಳಿ ವೃಕ್ಷ ಪೂಜೆ, ಬಸವ ಪೂಜೆ, ಮಾಡಲಾಯಿತು. ಬಳಿಕ ಭಕ್ತರೆಲ್ಲಾ ಸೇರಿ ಶ್ರೀ ಮಲೈಮಹದೇಶ್ವರಸ್ವಾಮಿ ರಥ ಎಳೆದು ಹರಕೆ ತಿರಿಸಿದರು. ನಂತರ ಅನ್ನ ಸಂತರ್ಪಣೆ ನಡೆಯಿತು.
ಗ್ರಾಮದ ಗೌಡಿಕೆ ಶಿವಮಲ್ಲಪ್ಪ, ಶಿವರಾಜಪ್ಪ ಪ್ರಭುಸ್ವಾಮಿ, ಗುರುಸ್ವಾಮಿ, ಎನ್ ಪಿ.ನಾಗರಾಜಪ್ಪ, ಎನ್.ಪಿ.ಶಿವಣ್ಣ, ಶಿವಕುಮಾರ್, ಶಿಕ್ಷಕರಾದ ಪರಶಿವಮೂರ್ತಿ ಎನ್ ಪಿ, ಮಹೇಶ್, ಕುಮಾರ, ರವಿ, ಮಂಜುನಾಥ, ಮಹದೇವಪ್ಪ, ಸತೀಶ್, ಸುತ್ತಮುತ್ತಲಿನ ಸಹಸ್ರಾರು ಭಕ್ತರು ಭಾಗವಹಿಸಿದ್ದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…