ಮೈಸೂರು

ನಂಜೀಪುರ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ಮಹದೇಶ್ವರಸ್ವಾಮಿ ಕೊಂಡೋತ್ಸವ

ಸರಗೂರು: ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ನಂಜೀಪುರ ಗ್ರಾಮದಲ್ಲಿ ಮಲೆ ಮಹದೇಶ್ವರಸ್ವಾಮಿ ರಥೋತ್ಸವ ಮತ್ತು ಕೊಂಡೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಜಾತ್ರೆಯ ಹಿನ್ನೆಲೆ ಪ್ರತಿ ವರ್ಷದಂತೆ ದೇವಸ್ಥಾನಗಳಿಗೆ ವಿವಿಧ ಬಣ್ಣಗಳನ್ನು ಬಳಿದು ಸಿಂಗರಿಸಲಾಗಿತ್ತು. ವಿದ್ಯುತ್ ದೀಪಾಲಂಕಾರ ಮತ್ತು ಬಗೆ ಬಗೆಯ ಹೂವುಗಳಿಂದ ರಥವನ್ನು ಅಲಂಕೃತಗೊಳಿಸಿ, ಮಧುವಣಗಿತ್ತಿಯಂತೆ ಸಿಂಗರಿಸಲಾಗಿತ್ತು. ರಥದಲ್ಲಿ ಉತ್ಸವ ಮೂರ್ತಿಯನ್ನು ವಿರಾಜಮಾನವಾಗಿ ಕೂರಿಸಿ ಗ್ರಾಮದ ಬೀದಿಗಳಲ್ಲಿ ಜಾನಪದ ಕಲಾ ತಂಡಗಳಾದ ವೀರಗಾಸೆ ಕುಣಿತ, ನಗಾರಿ, ಮಂಗಳ ವಾದ್ಯಗಳು ಮೊಳಗಿ, ಸತ್ತಿಗೆಗಳು ಮೆರವಣಿಗೆಗೆ ಮೆರಗು ನೀಡಿದವು.

ಬೆಳಿಗ್ಗೆಯಿಂದಲೇ ಹೋಮ, ಹವನಗಳು ನಡೆದವು. ದೇವರ ಉತ್ಸವಮೂರ್ತಿಯನ್ನು ನುಗು ನದಿ ದಡಕ್ಕೆ ಕರೆತಂದು ವಿಶೇಷ ಪೂಜೆ ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ದೇವಸ್ಥಾನದ ಬಳಿಗೆ ತರಲಾಯಿತು. ನಂತರ ದೇವಸ್ಥಾನದ ಆವರಣದಲ್ಲಿ ಹಾಕಲಾಗಿದ್ದ ಕೊಂಡೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರು ಕೊಂಡ ಹಾಯುವುದರ ಮೂಲಕ ಭಕ್ತಿಯನ್ನು ಮೆರೆದರು. ನಂತರ ದೇವಸ್ಥಾನದ ಬಳಿ ವೃಕ್ಷ ಪೂಜೆ, ಬಸವ ಪೂಜೆ, ಮಾಡಲಾಯಿತು. ಬಳಿಕ ಭಕ್ತರೆಲ್ಲಾ ಸೇರಿ ಶ್ರೀ ಮಲೈಮಹದೇಶ್ವರಸ್ವಾಮಿ ರಥ ಎಳೆದು ಹರಕೆ ತಿರಿಸಿದರು. ನಂತರ ಅನ್ನ ಸಂತರ್ಪಣೆ ನಡೆಯಿತು.

ಗ್ರಾಮದ ಗೌಡಿಕೆ ಶಿವಮಲ್ಲಪ್ಪ, ಶಿವರಾಜಪ್ಪ ಪ್ರಭುಸ್ವಾಮಿ, ಗುರುಸ್ವಾಮಿ, ಎನ್ ಪಿ.ನಾಗರಾಜಪ್ಪ, ಎನ್.ಪಿ.ಶಿವಣ್ಣ, ಶಿವಕುಮಾರ್, ಶಿಕ್ಷಕರಾದ ಪರಶಿವಮೂರ್ತಿ ಎನ್ ಪಿ, ಮಹೇಶ್‌, ಕುಮಾರ, ರವಿ, ಮಂಜುನಾಥ, ಮಹದೇವಪ್ಪ, ಸತೀಶ್, ಸುತ್ತಮುತ್ತಲಿನ ಸಹಸ್ರಾರು ಭಕ್ತರು ಭಾಗವಹಿಸಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

2 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

2 hours ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

2 hours ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

2 hours ago