ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ ಪ್ರಸಾದ್ ಕೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ (PCMB)ದಲ್ಲಿ 600 ಅಂಕಗಳಿಗೆ 529 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಶ್ರವಣ ದೋಷ ಇರುವ ಮಹದೇವಪ್ರಸಾದ್ ಸಾಮಾನ್ಯ ಮಕ್ಕಳನ್ನ ಮೀರಿಸಿ ಅತ್ಯಧಿಕ ಅಂಕ ಗಳಿಸಿರುವುದು ಗಮನಾರ್ಹವಾಗಿದ್ದು, ಇವರು ಇಂಜಿನಿಯರ್ ಆಗಬೇಕು ಎಂಬ ಮಹಾದಾಸೆ ಹೊಂದಿದ್ದಾರೆ.
ಈತನ ಕನಸಿಗೆ ಅಡ್ಡವಾಗಿರುವ ಆರ್ಥಿಕ ಪರಿಸ್ಥಿತಿ. ಈತನ ಪೋಷಕರು ಕೂಲಿ ಕೆಲಸ ಮಾಡುತ್ತಿದ್ದು, ತಾಯಿ ಮಹೇಶ್ವರಿ ಬದನಗುಪ್ಪೆ ಕುಕ್ಕರ್ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ತಂದೆ ಕಾಂತರಾಜು ಬೇರೆಯವರ ಜಮೀನಿನಲ್ಲಿ ಕೂಲಿ ಮಾಡುತ್ತಿದ್ದಾರೆ.
ಅವನು ಚೆನ್ನಾಗಿ ಓದಿ ಒಳ್ಳೆಯ ಆಫೀಸರ್ ಆಗಬೇಕು ಎಂಬುದು ಪೋಷಕರ ಮಹದಾಸೆಯಾಗಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…