ಮೈಸೂರು

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಹಾಶಿವರಾತ್ರಿ ಸಂಭ್ರಮ

ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾದ ನಂಜನಗೂಡಿನಲ್ಲಿ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದೆ.
ಇಂದು ಬೆಳಗಿನ ಜಾವದಿಂದಲೇ ನಂಜನಗೂಡಿಗೆ ಭಕ್ತ ಸಾಗರ ಹರಿದು ಬರುತ್ತಿದ್ದು, ಶ್ರೀಕಂಠೇಶ್ವರನ ದೇವಾಲಯದಲ್ಲಿ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇಂದು ಮಹಾಶಿವರಾತ್ರಿ ಹಬ್ಬದ ಅಂಗವಾಗಿ ದೇವಾಲಯಕ್ಕೆ ಸಾವಿರಾರು ಜನರು ಬರುತ್ತಿದ್ದು, ಅವರೆಲ್ಲ ಸರದಿಯಲ್ಲಿ ನಿಂತು ನಂಜುಂಡೇಶ್ವರನನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಿಂದ ಒಳಭಾಗದವರೆಗೂ ವಿಶೇಷ ದರ್ಶನ ಹಾಗೂ ಉಚಿತ ದರ್ಶನದವರಿಗಾಗಿ ಬ್ಯಾರಿಕೇಡ್ ಅಳವಡಿಸಲಾಗಿದ್ದು ನೀರು-ನೆರಳಿನ ವ್ಯವಸ್ಥೆ ಮಾಡಲಾಗಿದೆ.

ಅನೇಕ ವರ್ಷಗಳಿಂದ ನೀಡಲಾಗುತ್ತಿದ್ದ ಪಾಸ್ ವ್ಯವಸ್ಥೆಯನ್ನು ಈ ಬಾರಿ ಜಿಲ್ಲಾಧಿಕಾರಿಗಳು ರದ್ದುಗೊಳಿಸಿದ್ದು, ಗಣ್ಯರಿಗೆ, ಹಿರಿಯರಿಗೆ, ಅಂಗವಿಕಲರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಇನ್ನು ಕಪಿಲಾ ನದಿ ದಡದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಾ ಸಾಧನಗಳು ಹಾಗೂ ನುರಿತ ಈಜುಗಾರರೊಂದಿಗೆ ಬೀಡು
ಬಿಟ್ಟು ಯಾವುದೇ ಅಪಾಯ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.

ನಾಳೆ ಮುಂಜಾನೆಯವರೆಗೆ ನಡೆಯಲಿರುವ ಜಾಗರಣೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇಂದು ಬೆಳಿಗ್ಗೆಯಿಂದ ದೇವಾಲಯಕ್ಕೆ ಆಗಮಿಸಿರುವ ಭಕ್ತರಿಗೆ ದಾಸೋಹ ಭವನದಲ್ಲಿ ಪ್ರಸಾದ ವಿತರಣೆ ನಡೆಯುತ್ತಿದೆ.

ಇಂದು ಬೆಳಗಿನ ಜಾವ ೪.೩೦ಕ್ಕೆ ಶ್ರೀಕಂಠೇಶ್ವರ ದೇವಾಲಯದ ಬಾಗಿಲು ತೆರೆದು ನಾಳೆ ಬೆಳಿಗ್ಗೆ ೫ ಗಂಟೆಯವರೆಗೂ ದೇವಾಲಯದ ಅರ್ಚಕ ಸಮೂಹದ ನೇತೃತ್ವದಲ್ಲಿ ದೇವಾಲಯದಲ್ಲಿ ಜಾವ ಜಾವಕ್ಕೆ ಅಭಿಷೇಕ, ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

4 mins ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

14 mins ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

57 mins ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

2 hours ago