ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾದ ನಂಜನಗೂಡಿನಲ್ಲಿ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದೆ.
ಇಂದು ಬೆಳಗಿನ ಜಾವದಿಂದಲೇ ನಂಜನಗೂಡಿಗೆ ಭಕ್ತ ಸಾಗರ ಹರಿದು ಬರುತ್ತಿದ್ದು, ಶ್ರೀಕಂಠೇಶ್ವರನ ದೇವಾಲಯದಲ್ಲಿ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇಂದು ಮಹಾಶಿವರಾತ್ರಿ ಹಬ್ಬದ ಅಂಗವಾಗಿ ದೇವಾಲಯಕ್ಕೆ ಸಾವಿರಾರು ಜನರು ಬರುತ್ತಿದ್ದು, ಅವರೆಲ್ಲ ಸರದಿಯಲ್ಲಿ ನಿಂತು ನಂಜುಂಡೇಶ್ವರನನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಿಂದ ಒಳಭಾಗದವರೆಗೂ ವಿಶೇಷ ದರ್ಶನ ಹಾಗೂ ಉಚಿತ ದರ್ಶನದವರಿಗಾಗಿ ಬ್ಯಾರಿಕೇಡ್ ಅಳವಡಿಸಲಾಗಿದ್ದು ನೀರು-ನೆರಳಿನ ವ್ಯವಸ್ಥೆ ಮಾಡಲಾಗಿದೆ.
ಅನೇಕ ವರ್ಷಗಳಿಂದ ನೀಡಲಾಗುತ್ತಿದ್ದ ಪಾಸ್ ವ್ಯವಸ್ಥೆಯನ್ನು ಈ ಬಾರಿ ಜಿಲ್ಲಾಧಿಕಾರಿಗಳು ರದ್ದುಗೊಳಿಸಿದ್ದು, ಗಣ್ಯರಿಗೆ, ಹಿರಿಯರಿಗೆ, ಅಂಗವಿಕಲರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಇನ್ನು ಕಪಿಲಾ ನದಿ ದಡದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಾ ಸಾಧನಗಳು ಹಾಗೂ ನುರಿತ ಈಜುಗಾರರೊಂದಿಗೆ ಬೀಡು
ಬಿಟ್ಟು ಯಾವುದೇ ಅಪಾಯ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.
ನಾಳೆ ಮುಂಜಾನೆಯವರೆಗೆ ನಡೆಯಲಿರುವ ಜಾಗರಣೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇಂದು ಬೆಳಿಗ್ಗೆಯಿಂದ ದೇವಾಲಯಕ್ಕೆ ಆಗಮಿಸಿರುವ ಭಕ್ತರಿಗೆ ದಾಸೋಹ ಭವನದಲ್ಲಿ ಪ್ರಸಾದ ವಿತರಣೆ ನಡೆಯುತ್ತಿದೆ.
ಇಂದು ಬೆಳಗಿನ ಜಾವ ೪.೩೦ಕ್ಕೆ ಶ್ರೀಕಂಠೇಶ್ವರ ದೇವಾಲಯದ ಬಾಗಿಲು ತೆರೆದು ನಾಳೆ ಬೆಳಿಗ್ಗೆ ೫ ಗಂಟೆಯವರೆಗೂ ದೇವಾಲಯದ ಅರ್ಚಕ ಸಮೂಹದ ನೇತೃತ್ವದಲ್ಲಿ ದೇವಾಲಯದಲ್ಲಿ ಜಾವ ಜಾವಕ್ಕೆ ಅಭಿಷೇಕ, ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…