ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾದ ನಂಜನಗೂಡಿನಲ್ಲಿ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದೆ.
ಇಂದು ಬೆಳಗಿನ ಜಾವದಿಂದಲೇ ನಂಜನಗೂಡಿಗೆ ಭಕ್ತ ಸಾಗರ ಹರಿದು ಬರುತ್ತಿದ್ದು, ಶ್ರೀಕಂಠೇಶ್ವರನ ದೇವಾಲಯದಲ್ಲಿ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇಂದು ಮಹಾಶಿವರಾತ್ರಿ ಹಬ್ಬದ ಅಂಗವಾಗಿ ದೇವಾಲಯಕ್ಕೆ ಸಾವಿರಾರು ಜನರು ಬರುತ್ತಿದ್ದು, ಅವರೆಲ್ಲ ಸರದಿಯಲ್ಲಿ ನಿಂತು ನಂಜುಂಡೇಶ್ವರನನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಿಂದ ಒಳಭಾಗದವರೆಗೂ ವಿಶೇಷ ದರ್ಶನ ಹಾಗೂ ಉಚಿತ ದರ್ಶನದವರಿಗಾಗಿ ಬ್ಯಾರಿಕೇಡ್ ಅಳವಡಿಸಲಾಗಿದ್ದು ನೀರು-ನೆರಳಿನ ವ್ಯವಸ್ಥೆ ಮಾಡಲಾಗಿದೆ.
ಅನೇಕ ವರ್ಷಗಳಿಂದ ನೀಡಲಾಗುತ್ತಿದ್ದ ಪಾಸ್ ವ್ಯವಸ್ಥೆಯನ್ನು ಈ ಬಾರಿ ಜಿಲ್ಲಾಧಿಕಾರಿಗಳು ರದ್ದುಗೊಳಿಸಿದ್ದು, ಗಣ್ಯರಿಗೆ, ಹಿರಿಯರಿಗೆ, ಅಂಗವಿಕಲರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಇನ್ನು ಕಪಿಲಾ ನದಿ ದಡದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಾ ಸಾಧನಗಳು ಹಾಗೂ ನುರಿತ ಈಜುಗಾರರೊಂದಿಗೆ ಬೀಡು
ಬಿಟ್ಟು ಯಾವುದೇ ಅಪಾಯ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.
ನಾಳೆ ಮುಂಜಾನೆಯವರೆಗೆ ನಡೆಯಲಿರುವ ಜಾಗರಣೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇಂದು ಬೆಳಿಗ್ಗೆಯಿಂದ ದೇವಾಲಯಕ್ಕೆ ಆಗಮಿಸಿರುವ ಭಕ್ತರಿಗೆ ದಾಸೋಹ ಭವನದಲ್ಲಿ ಪ್ರಸಾದ ವಿತರಣೆ ನಡೆಯುತ್ತಿದೆ.
ಇಂದು ಬೆಳಗಿನ ಜಾವ ೪.೩೦ಕ್ಕೆ ಶ್ರೀಕಂಠೇಶ್ವರ ದೇವಾಲಯದ ಬಾಗಿಲು ತೆರೆದು ನಾಳೆ ಬೆಳಿಗ್ಗೆ ೫ ಗಂಟೆಯವರೆಗೂ ದೇವಾಲಯದ ಅರ್ಚಕ ಸಮೂಹದ ನೇತೃತ್ವದಲ್ಲಿ ದೇವಾಲಯದಲ್ಲಿ ಜಾವ ಜಾವಕ್ಕೆ ಅಭಿಷೇಕ, ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…