ಮೈಸೂರು

ಮಹಾತ್ಮ ಗಾಂಧೀಜಿ 155ನೇ ಜಯಂತಿ: ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ. ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ 31 ಸಾವಿರ ರೂ. ದ್ವಿತೀಯ 21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು.

ಪ್ರೌಢ ಶಾಲಾ ವಿಭಾಗ: 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, 4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ, ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗ: 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ: 1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, 2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, 3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, 4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, 5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ದಿನಾಂಕ : 06-09-2024 ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಸ್ಪರ್ಧೆ ಏರ್ಪಡಿಸಿ ದಿನಾಂಕ : 10-09-2024 ರೊಳಗಾಗಿ ಮೌಲ್ಯಮಾಪನ ಮಾಡಿ, ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಲಿದೆ. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.

ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು (3) ಪ್ರಬಂಧಗಳಿಗೆ ಅಕ್ಟೋಬರ್ 02 ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರಿಗೆ ಗೌರವಿಸಲಾಗುವುದು.

ನಿಬಂಧನೆಗಳು: ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಆಕರವಾಗಿ ಬಳಸಿದ ಪರಾಮರ್ಶನ / ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಆಧಾರ ಗ್ರಂಥಗಳು / ಮೊಬೈಲ್ ಗಳ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

58 mins ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

1 hour ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

1 hour ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

2 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

2 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

2 hours ago