ಮೈಸೂರು

ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ನಿಷೇಧ

ಮೈಸೂರು : ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಪೊಲೀಸ್‌ ಇಲಾಖೆ ಬ್ರೇಕ್‌ ಹಾಕಿದೆ. ಎರಡು ಕಾರ್ಯಕ್ರಮಗಳಿಗೂ ಇಲಾಖೆ ಅನುಮತಿ ನಿರಾಕರಿಸಿದೆ.

ಇದೇ ತಿಂಗಳ 13 ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಕರೆ ಕೊಟ್ಟಿತ್ತು. ಚಾಮುಂಡಿ ಬೆಟ್ಟಕ್ಕೆ ತೆರಳಿ ಮಹಿಷನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಹಿಷ ದಸರಾಗೆ ಚಾಲನೆ ನೀಡಲು ನಿರ್ಧರಿಸಿತ್ತು.

ಮಹಿಷ ದಸರಾ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದರು. ಮಹಿಷ ದಸರಾ ಆಚರಣೆ ವಿರೋಧಿಸಿ ಅದೇ ದಿನ (ಅ.13) ಚಲೋ ಚಾಮುಂಡಿ ಬೆಟ್ಟ ಹಮ್ಮಿಕೊಳ್ಳಲಾಗಿದೆ. ಪ್ರತಾಪ್‌ ಸಿಂಹ ನೇತೃತ್ವದಲ್ಲಿ ಬಿಜೆಪಿ ಮೈಸೂರಿನಲ್ಲಿ ಈ ಚಲೋ ಚಾಮುಂಡಿ ಬೆಟ್ಟ ಕರೆ ನೀಡಿತ್ತು.

ಎರಡು ಕಾರ್ಯಕ್ರಮದ ಆಯೋಜಕರು ಪೊಲೀಸ್ ಅನುಮತಿ ಕೇಳಿದ್ದರು. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಪೊಲೀಸ್‌ ಇಲಾಖೆ ಅನುಮತಿ ನಿರಾಕರಿಸಿದೆ.

ಎರಡೂ ಕಾರ್ಯಕ್ರಮಗಳಿಗೆ ಅನುಮತಿ ನೀಡಿಲ್ಲ. ದಸರಾ ಸಂದರ್ಭದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ನಗರದ ಪೊಲೀಸ್ ಅಯುಕ್ತ ರಮೇಶ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

lokesh

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

37 mins ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

41 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

43 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

45 mins ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

54 mins ago