ಮೈಸೂರು : ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ಎರಡು ಕಾರ್ಯಕ್ರಮಗಳಿಗೂ ಇಲಾಖೆ ಅನುಮತಿ ನಿರಾಕರಿಸಿದೆ.
ಇದೇ ತಿಂಗಳ 13 ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಕರೆ ಕೊಟ್ಟಿತ್ತು. ಚಾಮುಂಡಿ ಬೆಟ್ಟಕ್ಕೆ ತೆರಳಿ ಮಹಿಷನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಹಿಷ ದಸರಾಗೆ ಚಾಲನೆ ನೀಡಲು ನಿರ್ಧರಿಸಿತ್ತು.
ಮಹಿಷ ದಸರಾ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದರು. ಮಹಿಷ ದಸರಾ ಆಚರಣೆ ವಿರೋಧಿಸಿ ಅದೇ ದಿನ (ಅ.13) ಚಲೋ ಚಾಮುಂಡಿ ಬೆಟ್ಟ ಹಮ್ಮಿಕೊಳ್ಳಲಾಗಿದೆ. ಪ್ರತಾಪ್ ಸಿಂಹ ನೇತೃತ್ವದಲ್ಲಿ ಬಿಜೆಪಿ ಮೈಸೂರಿನಲ್ಲಿ ಈ ಚಲೋ ಚಾಮುಂಡಿ ಬೆಟ್ಟ ಕರೆ ನೀಡಿತ್ತು.
ಎರಡು ಕಾರ್ಯಕ್ರಮದ ಆಯೋಜಕರು ಪೊಲೀಸ್ ಅನುಮತಿ ಕೇಳಿದ್ದರು. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.
ಎರಡೂ ಕಾರ್ಯಕ್ರಮಗಳಿಗೆ ಅನುಮತಿ ನೀಡಿಲ್ಲ. ದಸರಾ ಸಂದರ್ಭದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ನಗರದ ಪೊಲೀಸ್ ಅಯುಕ್ತ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…
ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ…