ಮೈಸೂರು

ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ನಿಷೇಧ

ಮೈಸೂರು : ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಪೊಲೀಸ್‌ ಇಲಾಖೆ ಬ್ರೇಕ್‌ ಹಾಕಿದೆ. ಎರಡು ಕಾರ್ಯಕ್ರಮಗಳಿಗೂ ಇಲಾಖೆ ಅನುಮತಿ ನಿರಾಕರಿಸಿದೆ.

ಇದೇ ತಿಂಗಳ 13 ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಕರೆ ಕೊಟ್ಟಿತ್ತು. ಚಾಮುಂಡಿ ಬೆಟ್ಟಕ್ಕೆ ತೆರಳಿ ಮಹಿಷನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಹಿಷ ದಸರಾಗೆ ಚಾಲನೆ ನೀಡಲು ನಿರ್ಧರಿಸಿತ್ತು.

ಮಹಿಷ ದಸರಾ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದರು. ಮಹಿಷ ದಸರಾ ಆಚರಣೆ ವಿರೋಧಿಸಿ ಅದೇ ದಿನ (ಅ.13) ಚಲೋ ಚಾಮುಂಡಿ ಬೆಟ್ಟ ಹಮ್ಮಿಕೊಳ್ಳಲಾಗಿದೆ. ಪ್ರತಾಪ್‌ ಸಿಂಹ ನೇತೃತ್ವದಲ್ಲಿ ಬಿಜೆಪಿ ಮೈಸೂರಿನಲ್ಲಿ ಈ ಚಲೋ ಚಾಮುಂಡಿ ಬೆಟ್ಟ ಕರೆ ನೀಡಿತ್ತು.

ಎರಡು ಕಾರ್ಯಕ್ರಮದ ಆಯೋಜಕರು ಪೊಲೀಸ್ ಅನುಮತಿ ಕೇಳಿದ್ದರು. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಪೊಲೀಸ್‌ ಇಲಾಖೆ ಅನುಮತಿ ನಿರಾಕರಿಸಿದೆ.

ಎರಡೂ ಕಾರ್ಯಕ್ರಮಗಳಿಗೆ ಅನುಮತಿ ನೀಡಿಲ್ಲ. ದಸರಾ ಸಂದರ್ಭದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ನಗರದ ಪೊಲೀಸ್ ಅಯುಕ್ತ ರಮೇಶ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

lokesh

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago