ಮೈಸೂರು

ವಿರೋಧ-ನಿರ್ಬಂಧ ನಡುವೆ ಇಂದು ಮಹಿಷಾ ದಸರಾ ಆಚರಣೆ: ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು: ಈ ಬಾರಿ ಮೈಸೂರು ದಸರಾ ವಿಶೇಷ ಸುದ್ದಿಯಲ್ಲಿದೆ, ಕಾರಣ ಮಹಿಷಾ ದಸರಾ ಆಚರಣೆ, ಬಿಜೆಪಿ ನಾಯಕರು ಮತ್ತು ಹಲವರ ವಿರೋಧದ ನಡುವೆ ಇಂದು ಶುಕ್ರವಾರ ಮಹಿಷಾ ದಸರಾ ಆಚರಣೆಯಾಗುತ್ತಿದ್ದು, ಮೈಸೂರು ನಗರದಲ್ಲಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಇಂದು ಬೆಳ್ಳಂಬೆಳಗ್ಗೆಯೇ ಮೈಸೂರಿಗೆ ಆಗಮಿಸುವವರನ್ನು ಪೊಲೀಸರು ತಪಾಸಣೆ ನಡೆಸಿದ್ದು, ಚಾಮುಂಡಿ ಬೆಟ್ಟಕ್ಕೆ ಹೋಗುವವರನ್ನು ಬೆಟ್ಟದ ತಪ್ಪಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ತಪಾಸಣೆ ಮಾಡಿದ್ದಾರೆ. ಮತ್ತೊಂದೆಡೆ ಇಂದು ಚಾಮುಂಡಿ ಬೆಟ್ಟಕ್ಕೆ ಬರು ಭಕ್ತರಿಗೂ ನಿರ್ಬಂಧ ವಿಧಿಸಲಾಗಿದೆ.

ಮೈಸೂರು ನಗರದ ಪುರಭವನದಲ್ಲಿ ಮಹಿಷ ದಸರಾ ಆರಂಭವಾಗುತ್ತಿದ್ದು, ಟೌನ್‌ಹಾಲ್‌ನಲ್ಲಿ ಕುಳಿತುಕೊಳ್ಳಲು ಎರಡು ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ.  ಈಗಾಗಲೇ ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಮಹಿಷ ದಸರಾಕ್ಕೆ ಜನರು ಆಗಮಿಸುತ್ತಿದ್ದು, ಕಾರ್ಯಕ್ರಮಕ್ಕೂ ಮುನ್ನ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಪ್ರತಿಮೆ ಮಾಲಾರ್ಪಣೆ ಮಾಡಿ ನಂತರ ಪುರಭವನದ ಆವರಣದಲ್ಲಿ ದಮ್ಮ ದೀಕ್ಷಾ ಸಮಾರಂಭ ನಡೆಯಲಿದೆ.

ಮಂಡ್ಯದಿಂದ ಮೈಸೂರಿಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಸಮಾನ ಮನಸ್ಕರ ವೇದಿಕೆಯಿಂದ ನೂರಾರು ಸಂಖ್ಯೆಯಲ್ಲಿ ಮಹಿಷ ದಸರಾಕ್ಕೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಇತ್ತ ಮಹಿಷ ಉತ್ಸವಕ್ಕೆ ಚಾಮರಾಜನಗರದಿಂದಲೂ ದಲಿತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಮೈಸೂರಿಗೆ ಆಗಮಿಸಿದ್ದು, ಚಾಮರಾಜನಗರ ಜಿಲ್ಲೆಯ ವಿವಿಧೆಡೆಯಿಂದ ಹೊರಟ ಕಾರ್ಯಕರ್ತರು ಹತ್ತಾರು ಬಸ್‌ಗಳಲ್ಲಿ ಮೈಸೂರಿನತ್ತ ಆಗಮಿಸಿದ್ದಾರೆ. ಆರಂಭದಲ್ಲಿ ಚಾಮರಾಜನಗರದಲ್ಲಿ ಡಾ ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಮಹಿಷಾಸುರನಿಗೆ ಜಯವಾಗಲಿ ಎಂದು ಘೋಷಣೆ ಕೂಗಿ ಮೈಸೂರಿನತ್ತ ಪಯಣ ಬೆಳೆಸಿದರು.

ಯಾರ್ಯಾರು ಭಾಗಿ: ಇಂದು ನಡೆಯುವ ಮಹಿಷ ದಸರಾ ಕಾರ್ಯಕ್ರಮದಲ್ಲಿ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮಿಜಿ, ಇತಿಹಾಸ ತಜ್ಞ ನಂಜರಾಜೇ ಅರಸು, ಕೆ ಎಸ್ ಭಗವಾನ್, ನಿವೃತ್ತ ಪ್ರಾಧ್ಯಾಪಕ ಮಹೇಶ್ ಚಂದ್ರ ಗುರು ಸೇರಿದಂತೆ ಪ್ರಗತಿಪರ ಚಿಂತಕರು, ದಲಿತ ನಾಯಕರು ಭಾಗಿಯಾಗಲಿದ್ದಾರೆ.

ಇಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹಿನ್ನೆಲೆ ಬೆಟ್ಟದ ಮೇಲೆ ಮಾಧ್ಯಮಗಳಿಗೂ ನಿರ್ಬಂಧ ವಿಧಿಸಲಾಗಿದೆ. ಚಾಮುಂಡಿಬೆಟ್ಟದ ಮಾರ್ಗ ತಾವರೆಕಟ್ಟೆ ಬಳಿ ಬ್ಯಾರಿಕೇಡ್ ಹಾಕಿ ಎಲ್ಲರನ್ನೂ ತಡೆಯಲಾಗಿದ್ದು, ಇಬ್ಬರು ಎಸಿಪಿ, 5 ಜನ ಇನ್ಸಪೆಕ್ಟರ್, 6 ಸಬ್ ಇನ್ಸ್‌ಪೆಕ್ಟರ್, ಎಎಸ್‌ಐ ಸೇರಿ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ 2 ಕೆಎಸ್‌ಆರ್‌ಪಿ ತುಕಡಿ 2 ಸಿಆರ್‌ ತುಕಡಿ 2 ಖಾಲಿ ಬಸ್ ನಿಯೋಜನೆ ಮಾಡಲಾಗಿದೆ.

andolanait

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

2 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

3 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

4 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

4 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

5 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

6 hours ago