ಮೈಸೂರು : ಮಹಿಷಾ ದಸರಾ ಆಚರಣೆ ಮಾಡುವುದು ನಾಡ ಹಬ್ಬ ದಸರಾವನ್ನು ವಿರೋಧಿಸುವುದಕ್ಕಲ್ಲ. ಮಹಿಷಾ ಮತ್ತು ಚಾಮುಂಡಿ ಭೌಗೋಳಿಕವಾಗಿ ಎಲ್ಲೂ ಒಂದು ಕಡೆ ಹುಟ್ಟಿ ಬೆಳೆದವರಲ್ಲ. ಅಸುರರು ಎಂದರೆ ರಾಕ್ಷಸರಲ್ಲ. ಅವರು ರಕ್ಷಕರು ಎಂದು ಪ್ರೊ ಮಹೇಶ್ ಚಂದ್ರಗುರು ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಿಷಾ ನಮ್ಮ ಚಾರಿತ್ರಿಕ ಪುರುಷ ಈ ನೆಲದ ಮಹಾ ಪುರುಷನ ಆಚರಣೆ ಮಾಡೋದು ನಮ್ಮ ಧಾರ್ಮಿಕ ಕರ್ತವ್ಯ. ಸಂವಿಧಾನ ನಮಗೆ ಧಾರ್ಮಿಕ ಸ್ವಾತಂತ್ರ್ಯ ಕೊಟ್ಟಿದೆ. ಕಳೆದ 5 ವರ್ಷ ನಮಗೆ ಆಚರಣೆ ಮಾಡಲು ಅವಕಾಶ ಮಾಡಿಕೊಡಲಿಲ್ಲ.
ನಾವು ಮಹಿಷಾ ದಸರಾವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದೇವೆ. ಇತಿಹಾಸವನ್ನು ಮರೆಯಬಾರದು ನಮ್ಮ ಪರಂಪರೆಯನ್ನು ಮರೆಯಬಾರದು.ಚಾಮುಂಡಿ ತಾಯಿ ಪುರಾಣ ಪ್ರಸಿದ್ದರಾದವರು. ಆದರೆ ಮಹಿಷಾ ಇತಿಹಾಸ ಪುರುಷ. ಪುರಾಣ ಕಟ್ಟುಕತೆಗಳು, ಇತಿಹಾಸ ಸತ್ಯದ ಕತೆ ಎಂದರು.
ಸುಳ್ಳು ಮತ್ತು ಸತ್ಯದ ನಡುವೆ ನಡೆಯುವ ಸಂಘರ್ಷ ಇದು. ಮುಂದಿನ ಪೀಳಿಗೆಗೆ ನಾವು ಇತಿಹಾಸವನ್ನ ತಿಳಿಸದೇ ಮತ್ಯಾರು ತಿಳಿಸಬೇಕು. ನೀವು ಯಾರ ದಸರಾವನ್ನಾದರೂ ಮಾಡಿಕೊಳ್ಳಿ ನಾವು ಅಡ್ಡಿ ಮಾಡಲ್ಲ.ಮುಮ್ಮಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ದಸರಾ ಆರಂಭವಾಯಿತು. ನಾಲ್ವಡಿ ಅವರ ಕಾಲದಲ್ಲಿ ಇನ್ನೂ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಚಾಮುಂಡಿ ಮತ್ತು ಮಹಿಷಾ ಒಂದು ಕಾಲಘಟ್ಟದವರಲ್ಲ. ಮಹಿಷಾ ಸತ್ಯ,ಚಾಮುಂಡಿ ಮಿತ್ಯ. ನೀವು ಚಾಮುಂಡಿ ಪೂಜೆ ಮಾಡ್ತಿರಾ ಮಾಡಿ. ನಾವು ಮಹಿಷಾ ದಸರಾ ಆಚರಣೆ ಮಾಡ್ತಿವಿ ನೀವ್ಯಾಕೆ ಪ್ರಶ್ನೆ ಮಾಡ್ತಿರಾ ಎಂದರು.
ಈ ದೇಶದ ಅಸಲಿ ವಿಶ್ವಗುರು ಮೋದಿಯಲ್ಲ ಬುದ್ಧ,ಬಸವ,ಮಹಾತ್ಮ ಗಾಂಧಿ, ನಾರಾಯಣಗುರು. ಈ ದೇಶದ ಸಂಪತ್ತಿನ ವಾರಸುದಾರರು ಇಲ್ಲಿನ ಮೂಲ ನಿವಾಸಿಗಳು. ನಮ್ಮ ಸಂಸ್ಕೃತಿಯನ್ನು ಅಗೌರವಿಸಬೇಡಿ. ಚಾಮುಂಡಿ ಬೆಟ್ಟಕ್ಕೆ ಮೊದಲು ಮಹಾಬಲೇಶ್ವರ ಬೆಟ್ಟ ಎನ್ನುವ ಹೆಸರಿತ್ತು. ವೈದಿಕರು ಇದನ್ನ ನಾಶ ಮಾಡಿ ಚಾಮುಂಡಿ ಬೆಟ್ಟ ಅಂತ ಮಾಡಿದರು ಎಂದು ಸುದ್ದಿ ಗೋಷ್ಠಿಯಲ್ಲಿ ವಿಚಾರವಾದಿ ಪ್ರೊ.ಮಹೇಶ್ ಚಂದ್ರಗುರು ಹೇಳಿದರು
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…