ಮೈಸೂರು

ಮಹಿಷಾ ಸತ್ಯ ಚಾಮುಂಡಿ ಮಿತ್ಯ : ಪ್ರೊ ಮಹೇಶ್ ಚಂದ್ರಗುರು

ಮೈಸೂರು : ಮಹಿಷಾ ದಸರಾ ಆಚರಣೆ ಮಾಡುವುದು ನಾಡ ಹಬ್ಬ ದಸರಾವನ್ನು ವಿರೋಧಿಸುವುದಕ್ಕಲ್ಲ. ಮಹಿಷಾ ಮತ್ತು ಚಾಮುಂಡಿ ಭೌಗೋಳಿಕವಾಗಿ ಎಲ್ಲೂ ಒಂದು ಕಡೆ ಹುಟ್ಟಿ ಬೆಳೆದವರಲ್ಲ. ಅಸುರರು ಎಂದರೆ ರಾಕ್ಷಸರಲ್ಲ. ಅವರು ರಕ್ಷಕರು ಎಂದು ಪ್ರೊ ಮಹೇಶ್ ಚಂದ್ರಗುರು ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಿಷಾ ನಮ್ಮ ಚಾರಿತ್ರಿಕ ಪುರುಷ ಈ ನೆಲದ ಮಹಾ ಪುರುಷನ ಆಚರಣೆ ಮಾಡೋದು ನಮ್ಮ ಧಾರ್ಮಿಕ ಕರ್ತವ್ಯ. ಸಂವಿಧಾನ ನಮಗೆ ಧಾರ್ಮಿಕ ಸ್ವಾತಂತ್ರ್ಯ ಕೊಟ್ಟಿದೆ. ಕಳೆದ 5 ವರ್ಷ ನಮಗೆ ಆಚರಣೆ ಮಾಡಲು ಅವಕಾಶ ಮಾಡಿಕೊಡಲಿಲ್ಲ.

ನಾವು ಮಹಿಷಾ ದಸರಾವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದೇವೆ. ಇತಿಹಾಸವನ್ನು ಮರೆಯಬಾರದು ನಮ್ಮ ಪರಂಪರೆಯನ್ನು ಮರೆಯಬಾರದು.ಚಾಮುಂಡಿ ತಾಯಿ ಪುರಾಣ ಪ್ರಸಿದ್ದರಾದವರು. ಆದರೆ ಮಹಿಷಾ ಇತಿಹಾಸ ಪುರುಷ. ಪುರಾಣ ಕಟ್ಟುಕತೆಗಳು, ಇತಿಹಾಸ ಸತ್ಯದ ಕತೆ ಎಂದರು.

ಸುಳ್ಳು ಮತ್ತು ಸತ್ಯದ ನಡುವೆ ನಡೆಯುವ ಸಂಘರ್ಷ ಇದು. ಮುಂದಿನ ಪೀಳಿಗೆಗೆ ನಾವು ಇತಿಹಾಸವನ್ನ ತಿಳಿಸದೇ ಮತ್ಯಾರು ತಿಳಿಸಬೇಕು. ನೀವು ಯಾರ ದಸರಾವನ್ನಾದರೂ ಮಾಡಿಕೊಳ್ಳಿ ನಾವು ಅಡ್ಡಿ ಮಾಡಲ್ಲ.ಮುಮ್ಮಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ದಸರಾ ಆರಂಭವಾಯಿತು. ನಾಲ್ವಡಿ ಅವರ ಕಾಲದಲ್ಲಿ ಇನ್ನೂ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಚಾಮುಂಡಿ ಮತ್ತು ಮಹಿಷಾ ಒಂದು ಕಾಲಘಟ್ಟದವರಲ್ಲ. ಮಹಿಷಾ ಸತ್ಯ,ಚಾಮುಂಡಿ ಮಿತ್ಯ. ನೀವು ಚಾಮುಂಡಿ ಪೂಜೆ ಮಾಡ್ತಿರಾ ಮಾಡಿ. ನಾವು ಮಹಿಷಾ ದಸರಾ ಆಚರಣೆ ಮಾಡ್ತಿವಿ ನೀವ್ಯಾಕೆ ಪ್ರಶ್ನೆ ಮಾಡ್ತಿರಾ ಎಂದರು.

ಈ ದೇಶದ ಅಸಲಿ ವಿಶ್ವಗುರು ಮೋದಿಯಲ್ಲ ಬುದ್ಧ,ಬಸವ,ಮಹಾತ್ಮ ಗಾಂಧಿ, ನಾರಾಯಣಗುರು. ಈ ದೇಶದ ಸಂಪತ್ತಿನ ವಾರಸುದಾರರು ಇಲ್ಲಿನ ಮೂಲ ನಿವಾಸಿಗಳು. ನಮ್ಮ ಸಂಸ್ಕೃತಿಯನ್ನು ಅಗೌರವಿಸಬೇಡಿ. ಚಾಮುಂಡಿ ಬೆಟ್ಟಕ್ಕೆ ಮೊದಲು ಮಹಾಬಲೇಶ್ವರ ಬೆಟ್ಟ ಎನ್ನುವ ಹೆಸರಿತ್ತು. ವೈದಿಕರು ಇದನ್ನ ನಾಶ ಮಾಡಿ ಚಾಮುಂಡಿ ಬೆಟ್ಟ ಅಂತ ಮಾಡಿದರು ಎಂದು ಸುದ್ದಿ ಗೋಷ್ಠಿಯಲ್ಲಿ ವಿಚಾರವಾದಿ ಪ್ರೊ.ಮಹೇಶ್ ಚಂದ್ರಗುರು ಹೇಳಿದರು

lokesh

Recent Posts

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

10 mins ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

58 mins ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

3 hours ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

3 hours ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

4 hours ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

4 hours ago