ಮೈಸೂರು: ಮೈಸೂರು ಜಿಲ್ಲಾ ಹಾಲು ಒಕ್ಕೂಟದ ( ಮೈಮುಲ್) ನೂತನ ಅಧ್ಯಕ್ಷರಾಗಿ ಆರ್.ಚೆಲುವರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಆಲನಹಳ್ಳಿಯಲ್ಲಿರುವ ಮೆಗಾ ಡೇರಿಯಲ್ಲಿ ಬುಧವಾರ(ಆ.7) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತಿ.ನರಸೀಪುರ ತಾಲೂಕಿನ ಆರ್.ಚೆಲುವರಾಜು ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಸಲ್ಲಿಕೆಗೆ ನಿಗದಿಪಡಿಸಿದ್ದ ಮ. 12 ಗಂಟೆಯವರೆಗೆ ಬೇರೆ ಯಾರೂ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಲಿಲ್ಲ. ನಂತರ, ಚುನಾವಣಾ ಪ್ರಕ್ರಿಯೆಯನ್ನು ಶುರು ಮಾಡಿದ ಚುನಾವಣಾಧಿಕಾರಿಯಾಗಿದ್ದ ಉಪ ವಿಭಾಗಾಧಿಕಾರಿ ಕೆ.ಆರ್.ರಕ್ಷಿತ್ ನಾಮಪತ್ರ ಪರಿಶೀಲನೆ ನಡೆಸಿ ಕ್ರಮಬದ್ಧವಾಗಿ ಇರುವುದನ್ನು ಪ್ರಕಟಿಸಿದರು.
ನಂತರ ಉಳಿದ ಪ್ರಕ್ರಿಯೆಯನ್ನು ಮುಗಿಸಿದ ಚುನಾವಣಾಧಿಕಾರಿ ಆರ್.ಚೆಲುವರಾಜು ಅಧ್ಯಕ್ಷರಾಗಿ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಘೋಷಣೆ ಮಾಡಿದರು. ಈ ಮೂಲಕ ಪಿ.ಎಂ.ಪ್ರಸನ್ನ ಅವರ ರಾಜೀನಾಮೆಯಿಂದ ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ತೆರೆ ಬಿದ್ದಿದೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…