ಮೈಸೂರು

ಜನರಿಗೆ ಮೂಲಭೂತ ಸೌಕರ್ಯ ಒದಗಿಸುವುದು ನರೇಗಾದ ಮುಖ್ಯ ಉದ್ದೇಶ: ಯೋಗೇಶ್‌

ಪಿರಿಯಾಪಟ್ಟಣ: ದುಡಿಯುವ ಕೂಲಿ ಕಾರ್ಮಿಕರಿಗೆ ಕೆಲಸ ನೀಡಿ ಅವರ ಜೀವನೋಪಾಯ ಬಲಪಡಿಸಿ ನೈಸರ್ಗಿಕ ಸಂಪತ್ತನ್ನ ನಿರ್ವಹಣೆ ಮಾಡಿ ಸಾರ್ವಜನಿಕರ ಕಾಮಗಾರಿಗಳನ್ನೂ ಅನುಷ್ಠಾನಗೊಳಿಸಿ ಮೂಲಭೂತ ಸೌಕರ್ಯ ಒದಗಿಸುವುದು ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮುಖ್ಯ ಉದ್ದೇಶ ಎಂದು ತಾಲೂಕು ಸಾಮಾಜಿಕ ಲೆಕ್ಕ ಪರಿಶೋಧನಾ ವ್ಯವಸ್ಥಾಪಕ ಯೋಗೇಶ್ ತಿಳಿಸಿದರು.

ತಾಲೂಕಿನ ಹಿಟ್ನೆ ಹೆಬ್ಬಾಗಿಲು ಗ್ರಾಮ ಪಂಚಾಯತಿ ಆವರಣದಲ್ಲಿ ಏರ್ಪಡಿಸಿದ್ದ 2023 -24 ನೇ ಸಾಲಿನ ಸಾಮಾಜಿಕ ಲೆಕ್ಕಪರಿಶೋಧನಾ ಸಭೆಯಲ್ಲಿ ಮಾತನಾಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ 15ನೇ ಹಣಕಾಸು ಯೋಜನೆ ಅಡಿ ಖರ್ಚು ವೆಚ್ಚದ ಲೆಕ್ಕವನ್ನು ಸಾರ್ವಜನಿಕರ ಮುಂದೆ ಪಾರದರ್ಶಕವಾಗಿ ಮಂಡಿಸಿ ಅನುಮೋದನೆ ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿದೆ ಎಂದರು.

ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತ್ರಿಪುರ, ಪಂಜಾಬ್ ಸೇರಿದಂತೆ ದೇಶದ 16 ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಸಾಮಾಜಿಕ ಪರಿಶೋಧನ ಅಧ್ಯಯನಕ್ಕೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಪಿರಿಯಾಪಟ್ಟಣ ತಾಲೂಕು ಸಾಮಾಜಿಕ ಪರಿಶೋಧನ ವ್ಯವಸ್ಥಾಪಕ ಯೋಗೇಶ್ ಬರಮಾಡಿಕೊಂಡರು.

ಪಂಜಾಬ್ ರಾಜ್ಯದ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ನಿರ್ದೇಶಕ ಕ್ಯಾಪ್ಟನ್ ಪಿಯುಸ್ ಸಾಮಾಜಿಕ ಪರಿಶೋಧನ ಸಭೆಯನ್ನು ವೀಕ್ಷಣೆ ಮಾಡಿ ಮಾತನಾಡಿ, ಸಮುದಾಯಿತ ಆಸ್ತಿಗಳನ್ನು ನಮ್ಮದು ಎಂಬ ಭಾವನೆಯಲ್ಲಿ ನಾವೆಲ್ಲರೂ ರಕ್ಷಿಸಬೇಕಾಗುತ್ತದೆ ನಮ್ಮ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಾರ್ವಜನಿಕರು ಸರ್ಕಾರಕ್ಕೆ ತೆರಿಗೆ ಕಟ್ಟುತ್ತಾರೆ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ವಿಳಂಬವಾಗುತ್ತದೆ ಸಾರ್ವಜನಿಕರು ಕೂಡ ತಾಳ್ಮೆಯಿಂದ ಸಹಕರಿಸಬೇಕು. ಸ್ಥಳೀಯ ಮಟ್ಟದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತೊರಿತಗತಿಯಲ್ಲಿ ಪರಿಹರಿಸಬೇಕು ಸಮಾಜಿಕ ಪರಿಶೋಧನಾ ಸಭೆಯ ಕಾರ್ಯಕ್ರಮ ನೋಡಿ ಮೆಚ್ಚುಗೆ ಎಂದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗೇಂದ್ರ ಕುಮಾರ್. ಜಿ.ಎಸ್, ಮಾತನಾಡಿ ನರೇಗಾ ಯೋಜನೆ ಅಡಿ ಸಾರ್ವಜನಿಕರು ವೈಯಕ್ತಿಕ ಕಾಮಗಾರಿಗುಗಳನ್ನು ಮಾಡಿಕೊಳ್ಳಲು ಮೊದಲು ವಾರ್ಡ್ ಸಭೆ ಮತ್ತು ಗ್ರಾಮ ಸಭೆಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದರು

ಕರ್ನಾಟಕ ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕಿ ಲೋಚನ.ಬಿ, ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕಿ ದಮಯಂತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಜಿ.ರವಿಕುಮಾರ್, ಉಪಾಧ್ಯಕ್ಷೆ ವನಜಾಕ್ಷಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗೇಂದ್ರ ಕುಮಾರ್.ಜಿ.ಎಸ್, ಗ್ರಾಮ ಪಂಚಾಯತಿ ಸದಸ್ಯರಾದ ಕಾಮರಾಜ್, ಮಹದೇವ್, ನರೇಗಾ ತಾಂತ್ರಿಕ ಅಭಿಯಂತರ ರಕ್ಷಿತ್, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಸಾರ್ವಜನಿಕರು ಹಾಜರಿದ್ದರು.

ಭೂಮಿಕಾ

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

2 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

2 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

2 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

2 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

2 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

2 hours ago