ಮೈಸೂರು

ಮೆಕ್ಕೆಜೋಳದ ಬೆಲೆಕುಸಿತ : ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ನೆರವು : ಸಿಎಂ

ಮೈಸೂರು : ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2400 ರೂ.ಗಳ ಎಂಎಸ್ ಪಿ ದರ ನಿಗದಿಯಾಗಿದ್ದು, ಇದುವರೆಗೆ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ. ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಮೆಕ್ಕೆ ಜೋಳದ ಖರೀದಿ ಬಗ್ಗೆ ಸಂಬಂಧಪಟ್ಟ ಸಚಿವರು , ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳದ ಬೆಲೆ ಕುಸಿತ ಕಂಡಿದ್ದು, ಉತ್ಪಾದನೆ ಹೆಚ್ಚಾಗಿದೆ. ಸುಮಾರು 55 ಲಕ್ಷ ಮೆಟ್ರಿಕ್ ಟನ್ ನಷ್ಟು ಮೆಕ್ಕೆಜೋಳವನ್ನು ರೈತರು ಬೆಳೆಯಬಹುದೆಂಬ ಅಂದಾಜಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮೆಕ್ಕೆ ಜೋಳ ಉತ್ಪತ್ತಿಯಲ್ಲಿ ಏರಿಕೆ ಕಂಡಿದ್ದರೂ ಸಹ , ಕೇಂದ್ರ ಸರ್ಕಾರ ಸುಮಾರು 70 ಲಕ್ಷ ಮೆ.ಟನ್ ನಷ್ಟು ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ನೋಡಲೆ ಏಜೆನ್ಸಿಗಳಾದ ನಫೆಡ್, ಎನ್ ಸಿ ಸಿಎಫ್ ಸಂಸ್ಥೆಗಳು ಮೆಕ್ಕೆ ಜೋಳ ಖರೀದಿ ಪ್ರಕ್ರಿಯೆ ನಡೆಸದೇ ಇರುವುದರಿಂದ, ರೈತರು ಕೆಲವಡೆ ಧರಣಿ ನಡೆಸುತ್ತಿದ್ದಾರೆ ಎಂದರು.

ಇದನ್ನು ಓದಿ: ಹುಲಿ ಓಡಾಡುವ ನಕಲಿ (AI) ವಿಡಿಯೋ : ಕ್ರಮಕ್ಕೆ ಮುಂದಾದ ಅರಣ್ಯ ಇಲಾಖೆ

ಮೆಕ್ಕೆಜೋಳ ಖರೀದಿಗೆ ಡಿಸ್ಟಲರಿಗಳೊಂದಿಗೆ ಚರ್ಚೆ:
ಡಿಸ್ಟಿಲರಿಗಳು ಮೆಕ್ಕೆ ಜೋಳ ಬೆಲೆ ಕಡಿಮೆ ಇದ್ದಾಗಲೇ ಹಿಂದೆಯೇ ಖರೀದಿಸಿ ಶೇಖರಣೆ ಮಾಡಿಕೊಂಡಿವೆ. ಮೆಕ್ಕೆಜೋಳವನ್ನು ನಿಯಮಾಸುಸಾರ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸಲು ಡಿಸ್ಟಲರಿ ಮಾಲೀಕರೊಂದಿಗೆ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸರ್ಕಾರದಿಂದ 10 ಲಕ್ಷ ಮೆ.ಟನ್ ಖರೀದಿ:
ಮೆಕ್ಕೆ ಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರ್ಕಾರ ಮಾಡಲಿದೆ. ರಾಜ್ಯ ಸರ್ಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ದೇಶದಲ್ಲಿಯೇ ಹೇರಳವಾಗಿ ಮೆಕ್ಕೆಜೋಳವನ್ನು ಬೆಳೆದಿದ್ದು, ಅದನ್ನು ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಪತ್ರಮುಖೇನ ಕೋರಲಾಗುವುದು ಎಂದರು.

ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ:
ಮೆಕ್ಕೆ ಜೋಳದ ಜೊತೆಗೆ ಹೆಸರು ಕಾಳು ಬೆಳೆ ಸಮಸ್ಯೆ ಬಗ್ಗೆ ಚರ್ಚಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಎಫ್ ಎ ಕ್ಯು ಬದಲಾವಣೆಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸುವ ಜೊತೆಗೆ ಸಂಬಂಧಪಟ್ಟವರ ತಂಡ ಈ ಬಗ್ಗೆ ದೆಹಲಿಗೂ ಭೇಟಿ ನೀಡಬೇಕೆಂದು ಸೂಚನೆ ನೀಡಲಾಗಿದೆ. ಇತ್ತೀಚೆಗೆ ಪ್ರಧಾನಿಯವರನ್ನು ಭೇಟಿಯಾಗಿ ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ಕೋರಲಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 15.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ರಾಜ್ಯದ ಮನವಿಗೆ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸವಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

3 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

3 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

3 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

3 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

3 hours ago