ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿನ ಯುವ ನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿಸಿ ಗುರಿ ಸಾಧಿಸಿ, ಯೋಜನೆಯ ಸೌಲಭ್ಯದ ಬಗ್ಗೆ ಅರ್ಹ ಫಲಾನುಭವಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇಂದು(ಆ.14) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವನಿಧಿ ಯೋಜನೆಯ ನೋಂದಣಿ ಕುರಿತು ಯೋಜನೆಯ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಸಂಸ್ಥೆಯಲ್ಲಿ 2023 ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ಪಡೆದ ವಿದ್ಯಾರ್ಥಿಗಳಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡುವ ಮೂಲಕ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಜನತೆಗೆ ಇದರ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಮಾಹಿತಿಯನ್ನು ಸಂಬಂಧಪಟ್ಟ ಆಧಿಕಾರಿಗಳಿಗೆ ನೀಡುವಂತೆ ತಿಳಿಸಿ, ಜಿಲ್ಲೆಯ ಅರ್ಹ ಪದವಿ, ಡಿಪ್ಲೋಮಾ, ಪದವೀಧರರು ಸರ್ಕಾರದ ಯೋಜನೆಯ ನೆರವು ಪಡೆಯುವಂತೆ ತಿಳಿಸಿದರು.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆ ಹಂತದಲ್ಲಿ ಅಭ್ಯರ್ಥಿಗಳ ಹಾಜರಿ ಕಡ್ಡಾಯವಲ್ಲವಾಗಿದ್ದು, ಅಭ್ಯರ್ಥಿಗಳು ನೀಡಿರುವ ದಾಖಲೆಯ ನೈಜತೆಯನ್ನು ಆಧರಿಸಿ ಅರ್ಜಿಯನ್ನು ತಿರಸ್ಕೃತ ಅಥವಾ ಅನುಮೋದನೆ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರಾದ ಡಿ ಎಂ ರಾಣಿಯವರು ಮಾತನಾಡಿ, ಇವರೆಗೂ ಮೈಸೂರು ಜಿಲ್ಲೆಯಲ್ಲಿ 6516 ಅಭ್ಯರ್ಥಿಗಳು ಇವನಿಗೆ ಯೋಜನೆ ಅಡಿ ನೋಂದಣಿ ಮಾಡಿಕೊಂಡಿದ್ದು, 4279 ಅಭ್ಯರ್ಥಿಗಳ ಅರ್ಜಿಯನ್ನು ಅನುಮೋದಿಸಲಾಗಿರುತ್ತದೆ. ಇನ್ನುಳಿದ ಅಭ್ಯರ್ಥಿಗಳ ಅರ್ಜಿಗಳ ಪರಿಶೀಲನೆ ಚಾಲ್ತಿಯಲ್ಲಿದ್ದು, ಆದಷ್ಟು ಬೇಗ ಪೂರ್ಣಗೊಳಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಯುವನಿಧಿ ಯೋಜನೆ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತಿ ತಿಂಗಳು 25 ನೇ ತಾರೀಕಿನಂದು ಸ್ವಯಂ ಘೋಷಣೆ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಸ್ವಯಂ ಘೋಷಣೆ ಮಾಡದೇ ಇರುವ ಅಭ್ಯರ್ಥಿಗಳಿಗೆ ನೇರನಗದು ವರ್ಗಾವಣೆಯಾಗುವುದಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಮೈಸೂರು ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…