ಮೈಸೂರು

ಜನರ ಸಮಸ್ಯೆ ಆಲಿಸಲು ಸಮಯ ನಿಗದಿ ಮಾಡಿ: ಅಧಿಕಾರಿಗಳಿಗೆ ಹೆಚ್‌ಸಿಎಂ ಸೂಚನೆ

ಮೈಸೂರು: ಜನಸ್ಪಂದನ ಕಾರ್ಯಕ್ರಮದ ಮೂಲ ಉದ್ದೇಶ ಆಡಳಿತ ವರ್ಗ ಮತ್ತು  ಜನರ ನಡುವೆ ಹಲವಾರು ಕಂದಕಗಳು ಉದ್ಭವಿಸುತ್ತಿದ್ದು, ಸಾಮಾನ್ಯ ಜನರು ನೇರವಾಗಿ ಅಧಿಕಾರಿಗಳನ್ನು ಭೇಟಿ  ಮಾಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದ ಪರಿಸ್ಥಿತಿ ಇರುವುದರಿಂದ, ಜನರ ಸಮಸ್ಯೆಗಳನ್ನು ಕೇಳಲು ಅಧಿಕಾರಿಗಳು ಸಮಯ ನಿಗದಿ ಮಾಡಿ ಅವರಿಗೆ ಸೂಕ್ತ ಪರಿಹಾರ ಸಿಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಹೇಳಿದರು.

ಇಂದು ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತ ವರ್ಗ ಮತ್ತು ಸಾರ್ವಜನಿಕರ ನಡುವೆ ಮಧ್ಯವರ್ತಿಗಳು ಮಧ್ಯ ಪ್ರವೇಶ ಮಾಡಿ ಸರ್ಕಾರದ ಯೋಜನೆಗಳನ್ನು ದುರುಪಯೋಗ ಮಾಡಿ, ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಆದ್ದರಿಂದ ನೇರವಾಗಿ ಸಾರ್ವಜನಿಕರೊಂದಿಗೆ ಸಂಪರ್ಕ ಇಟ್ಟುಕೊಂಡು , ಮುಕ್ತವಾಗಿ ಜನರ ಸಮಸ್ಯೆಗಳನ್ನು ಬಗೆಹರಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಆಯಾ ಸಂಬಂಧ ಪಟ್ಟ ಇಲಾಖೆಗಳು ಸಾರ್ವಜನಿಕರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಪಾರದರ್ಶಕತೆಯಲ್ಲಿ ಆಡಳಿತವನ್ನು ನಡೆಸಬೇಕು ಎಂದು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮಿಕಾಂತ ರೆಡ್ಡಿ ಮಾತನಾಡಿ, ಸಾರ್ವಜನಿಕರ ಎಲ್ಲಾ ಸಮಸ್ಯೆಗಳನ್ನು ಸ್ವೀಕರಿಸಿ ಸೂಕ್ತ ಪರಿಹಾರ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಲಹೆ, ಸೂಚನೆ ಮತ್ತು ಮಾರ್ಗದರ್ಶನಗಳನ್ನು ನೀಡಿ ಉತ್ತಮ ರೀತಿಯಲ್ಲಿ ಸೂಕ್ತ ಪರಿಹಾರ ದೊರಕುವಂತೆ ಮಾಡಲಾಗುವುದು ಎಂದರು.

ಸಾರ್ವಜನಿಕರೆಲ್ಲರು ತ್ವರಿತ ಗತಿಯಲ್ಲಿ ಎಲ್ಲಾ ಅರ್ಜಿಗಳನ್ನು ಡಿಜಿಟಲ್ ರೂಪದಲ್ಲಿ ಆನ್ಲೈನ್ ಮೂಲಕ ಅಥವಾ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿಸಬೇಕು ಎಂದು ಮನವಿ ಮಾಡಿದರು.  ಹಾಗೂ ಅರ್ಜಿಗಳು ಸಂಬಂಧಪಟ್ಟ ಇಲಾಖೆಗಳಿಗೆ ತಲುಪಿದ ಒಂದು ವಾರ ಅಥವಾ 10 ದಿನಗಳೊಳಗೆ ಕಾನೂನಿನ ಅನ್ವಯ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ವಿಧಾನ ಪರಿಷತ್ ನ ಸದಸ್ಯ ಮಂಜೇಗೌಡ, ಕೃಷ್ಣರಾಜ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಮುಡಾ ಅಧ್ಯಕ್ಷರಾದ ಕೆ. ಮರಿಗೌಡ,   ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

7 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

9 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

9 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

10 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

10 hours ago