ಮೈಸೂರು

ಜನರ ಸಮಸ್ಯೆ ಆಲಿಸಲು ಸಮಯ ನಿಗದಿ ಮಾಡಿ: ಅಧಿಕಾರಿಗಳಿಗೆ ಹೆಚ್‌ಸಿಎಂ ಸೂಚನೆ

ಮೈಸೂರು: ಜನಸ್ಪಂದನ ಕಾರ್ಯಕ್ರಮದ ಮೂಲ ಉದ್ದೇಶ ಆಡಳಿತ ವರ್ಗ ಮತ್ತು  ಜನರ ನಡುವೆ ಹಲವಾರು ಕಂದಕಗಳು ಉದ್ಭವಿಸುತ್ತಿದ್ದು, ಸಾಮಾನ್ಯ ಜನರು ನೇರವಾಗಿ ಅಧಿಕಾರಿಗಳನ್ನು ಭೇಟಿ  ಮಾಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದ ಪರಿಸ್ಥಿತಿ ಇರುವುದರಿಂದ, ಜನರ ಸಮಸ್ಯೆಗಳನ್ನು ಕೇಳಲು ಅಧಿಕಾರಿಗಳು ಸಮಯ ನಿಗದಿ ಮಾಡಿ ಅವರಿಗೆ ಸೂಕ್ತ ಪರಿಹಾರ ಸಿಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಹೇಳಿದರು.

ಇಂದು ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತ ವರ್ಗ ಮತ್ತು ಸಾರ್ವಜನಿಕರ ನಡುವೆ ಮಧ್ಯವರ್ತಿಗಳು ಮಧ್ಯ ಪ್ರವೇಶ ಮಾಡಿ ಸರ್ಕಾರದ ಯೋಜನೆಗಳನ್ನು ದುರುಪಯೋಗ ಮಾಡಿ, ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಆದ್ದರಿಂದ ನೇರವಾಗಿ ಸಾರ್ವಜನಿಕರೊಂದಿಗೆ ಸಂಪರ್ಕ ಇಟ್ಟುಕೊಂಡು , ಮುಕ್ತವಾಗಿ ಜನರ ಸಮಸ್ಯೆಗಳನ್ನು ಬಗೆಹರಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಆಯಾ ಸಂಬಂಧ ಪಟ್ಟ ಇಲಾಖೆಗಳು ಸಾರ್ವಜನಿಕರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಪಾರದರ್ಶಕತೆಯಲ್ಲಿ ಆಡಳಿತವನ್ನು ನಡೆಸಬೇಕು ಎಂದು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮಿಕಾಂತ ರೆಡ್ಡಿ ಮಾತನಾಡಿ, ಸಾರ್ವಜನಿಕರ ಎಲ್ಲಾ ಸಮಸ್ಯೆಗಳನ್ನು ಸ್ವೀಕರಿಸಿ ಸೂಕ್ತ ಪರಿಹಾರ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಲಹೆ, ಸೂಚನೆ ಮತ್ತು ಮಾರ್ಗದರ್ಶನಗಳನ್ನು ನೀಡಿ ಉತ್ತಮ ರೀತಿಯಲ್ಲಿ ಸೂಕ್ತ ಪರಿಹಾರ ದೊರಕುವಂತೆ ಮಾಡಲಾಗುವುದು ಎಂದರು.

ಸಾರ್ವಜನಿಕರೆಲ್ಲರು ತ್ವರಿತ ಗತಿಯಲ್ಲಿ ಎಲ್ಲಾ ಅರ್ಜಿಗಳನ್ನು ಡಿಜಿಟಲ್ ರೂಪದಲ್ಲಿ ಆನ್ಲೈನ್ ಮೂಲಕ ಅಥವಾ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿಸಬೇಕು ಎಂದು ಮನವಿ ಮಾಡಿದರು.  ಹಾಗೂ ಅರ್ಜಿಗಳು ಸಂಬಂಧಪಟ್ಟ ಇಲಾಖೆಗಳಿಗೆ ತಲುಪಿದ ಒಂದು ವಾರ ಅಥವಾ 10 ದಿನಗಳೊಳಗೆ ಕಾನೂನಿನ ಅನ್ವಯ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ವಿಧಾನ ಪರಿಷತ್ ನ ಸದಸ್ಯ ಮಂಜೇಗೌಡ, ಕೃಷ್ಣರಾಜ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಮುಡಾ ಅಧ್ಯಕ್ಷರಾದ ಕೆ. ಮರಿಗೌಡ,   ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

11 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

15 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago