ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.
ಬುಧವಾರ ಬೂದಹಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಗ್ರಾಮಸ್ಥರು ಹಾಗೂ ರೈತರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಪ್ರಾದೇಶಿಕ ಅರಣ್ಯಾಧಿಕಾರಿಗಳು ಬುಧವಾರ ರೈತ ಅಪ್ರೋಜ್ ಎಂಬವರ ಜಮೀನಿನಲ್ಲಿ ಬೋನು ಇಟ್ಟಿದ್ದರು. ಬೋನು ಇಟ್ಟ ರಾತ್ರಿಯೇ ಚಿರತೆ ಸೆರೆಯಾಗಿದ್ದು, ಗುರುವಾರ ಮುಂಜಾನೆಯ ನಸುಕಿನಲ್ಲಿ ಚಿರತೆ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿರುವುದು ಗೊತ್ತಾಗಿದೆ.
ಕೂಡಲೇ ಆಗಮಿಸಿದ ಅರಣ್ಯಾಧಿಕಾರಿಗಳ ತಂಡ ಸೆರೆ ಸಿಕ್ಕ ಗಂಡು ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಒಂದೇ ದಿನದಲ್ಲಿ ಚಿರತೆ ಸಿಕ್ಕಿ ಬಿದ್ದಿರುವುದು ಬೂದಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರು ಆಶ್ಚರ್ಯ ಹಾಗೂ ಖುಷಿ ಎರಡನ್ನೂ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಅಧಿಕಾರಿ ನಾಗರಾಜು, ಸಿಬ್ಬಂದಿಗಳು ಭೇಟಿ ನೀಡಿದ್ದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…