ಹುಲ್ಲಹಳ್ಳಿ : ಹಾಡಹಗಲೇ ಹುಲಿ ದಾಳಿ ಮಾಡಿ ಹಸುವೊಂದನ್ನು ಬಲಿ ಪಡೆದಿರುವ ಘಟನೆ ಸಮೀಪದ ಯಾಲೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಂಜಪಾಟೀಲ್ ಎಂಬುವವರು ತಮ್ಮ ಜಮೀನಿನಲ್ಲಿ ಮೇಯುಸುತ್ತಿದ ವೇಳೆ ಪಕ್ಕದಲ್ಲೇ ಪೊದೆಯಲ್ಲಿ ಹುಲಿ ಹಸುವಿನ ಮೇಲೆ ಏಕಾಏಕಿ ದಾಳಿ ಮಾಡಿ ಅರೆಬರೆ ತಿದ್ದು ಬಿಸಾಡಿ ಹೋಗಿದೆ. ಪಕ್ಷದಲ್ಲೇ ಇದ್ದ ಮಾಲೀಕ ಮಂಜುಪಾಟೀಲ್ ಅವರು ಕಿರುಚಾಡಿಕೊಂಡಾಗ ಹುಲಿ ಗಾಬರಿಯಿಂದ ಪರಾರಿಯಾಗಿದೆ. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳದಲ್ಲಿ ಸಿಸಿ ಕ್ಯಾಮಾರವನ್ನು ಅಳವಡಿಸಲಾಗಿದೆ.
ಇದನ್ನು ಓದಿ : ಕಾಡಿನಿಂದ ಹೊರಬಂದ 20 ಹುಲಿಗಳು ; ಕಾಡಂಚಿನ ಜನರಲ್ಲಿ ಹೆಚ್ಚಿದ ಆತಂಕ
ಗ್ರಾ ಪಂ ಸದಸ್ಯ ಗುರು ಪ್ರಸಾದ್ ಮಾತನಾಡಿ ಈ ಭಾಗದಲ್ಲಿ ರೈತರು ತಮ್ಮ ಜಮೀನುಗಳಿಗೆ ಹೋಗಿ ಕೆಲಸ ಮಾಡುತ್ತಾರೆ. ಈಗಿರುವಾಗ ಹಾಡಹಗಲೇ ಹುಲಿ ಹಸುವನ್ನು ಬಲಿ ಪಡೆದಿರುವುದ್ದರಿಂದ ಗ್ರಾಮದಲ್ಲಿ ಭಯದ ವಾತವರಣ ಕಾಣುತ್ತಿದೆ. ಅರಣ್ಯ ಅಧಿಕಾರಿಗಳು ತಕ್ಷಣದಲ್ಲಿ ಹುಲಿಯನ್ನು ಸೆರೆ ಹಿಡಿದು ರೈತರ ಕೃಷಿ ಕೆಲಸಕ್ಕೆ ಅನುಕೂಲ ಮಾಡಿಕೊಡಬೇಕು. ಲಕ್ಷಾಂತರ ಬೆಲೆ ಬಾಳುವ ಹಸು ಬಲಿಯಾಗಿರುವುದ್ದರಿಂದ ಹಸುವಿನ ಮಾಲೀಕನಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…