ಮೈಸೂರು

ಯತೀಂದ್ರಗೆ ಚುನಾವಣಾ ಬಹಿಷ್ಕಾರ ಹಾಕಿದ ಮಲ್ಲುಪುರ ಗ್ರಾಮಸ್ಥರು!

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್‌ ಬೋಸ್‌ ಪರವಾಗಿ ಮತಯಾಚಿಸಿದ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಬಹಿಷ್ಕಾರ್‌ ಬಿಸಿ ತಟ್ಟಿದೆ.

ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ಜನರು ಯತೀಂದ್ರ ಅವರನ್ನು ತರಾಟೆಗೆ ತೆಗದುಕೊಂಡ ಘಟನೆ ನಡೆದಿದೆ.

ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಬಳಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾ ನಿರತ ರೈತರನ್ನು ಭೇಟಿಯಾಗಿ ಮತ ಯಾಚಿಸಿದರು. ಈ ವೇಳೆ, ಬೇಡಿಕೆಗಳನ್ನು ಈಡೇರಿಸುವಂತೆ ಯತೀಂದ್ರರನ್ನು ರೈತರು ಒತ್ತಾಯಿಸಿದರು.

ಪ್ರತಿಭಟನಾ ನಿರತ ರೈತರನ್ನು ಓಲೈಸಲು ಯತೀಂದ್ರ ಅವರನ್ನು ರೈತರು ಲೆಕ್ಕಿಸದೇ ಚುನಾವಣೆಗೋಸ್ಕರ ಇಲ್ಲಿಗೆ ಬಂದಿದ್ದೀರಿ. ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ ಎಂದು ರೈತರು ಹೇಳಿದರು. ಇದಕ್ಕುತ್ತರಿಸಿದ ಯತೀಂದ್ರ, ಇದನ್ನು ನಮ್ಮ ತಂದೆಯವರ ಗಮನಕ್ಕೆ ತರುತ್ತೇನೆ ಎಂದರು. ಈ ಮಾತಿನಿಂದ ಸಿಟ್ಟಿಗೆದ್ದ ಪ್ರತಿಭಟನಾಕಾರರು ನಮ್ಮ ಬೇಡಿಕೆಯನ್ನು ಈಗಲೇ ಈಡೇರಿಸಿ. ಇಲ್ಲದಿದ್ದರೆ, ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

33 mins ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…

41 mins ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

8 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

8 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

8 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

8 hours ago