ಮೈಸೂರು

ಕಾರು ಹರಿದು ನಾಟಕ ನೋಡಿ ಮಲಗಿದ್ದ ವ್ಯಕ್ತಿ ಸಾವು

ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ ನಿದ್ರಿಸುತ್ತಿದ್ದವನ ಮೇಲೆ ಕಾರೊಂದು ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾ ಮುಂಜಾನೆ ನಡೆದಿದೆ.

ತಾಲ್ಲೂಕಿನ ಗಟ್ಟವಾಡಿ ಗ್ರಾಮದ ನಿವಾಸಿ ಪ್ರದೀಪ್ ಕುಮಾರ್ (೩೩) ಮೃತಪಟ್ಟವರು. ಆತನ ಸ್ನೇಹಿತ ಅದೇ ಗ್ರಾಮದ ನಿವಾಸಿ ರವಿ (೩೦)ಎಂಬಾತ ತೀವ್ರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರದೀಪ್ ಕುಮಾರ್ ಹಾಗೂ ರವಿ ಜಾತ್ರೆಗೆ ಬಂದವರು ಭಾನುವಾರ ರಾತ್ರಿ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿ ರಾತ್ರಿ ನಾಟಕ ನೋಡಿಕೊಂಡು ಬಳಿಕ ಊರಿಗೆ ತೆರಳಲು ಮುಂದಾಗಿದ್ದರು. ಆದರೆಮಧ್ಯರಾತ್ರಿ ಬಸ್ಸು ಲಭ್ಯವಿಲ್ಲದ ಕಾರಣ ರಂಗಸ್ಥಳದ ಪಕ್ಕದ ಕುಪ್ಪರವಳ್ಳಿ ರಸ್ತೆಯ ತಾತ್ಕಾಲಿಕ ವಾಹನ ಪಾರ್ಕಿಂಗ್ ಆವರಣದ ಸ್ಥಳದಲ್ಲಿ ಟಿಕೆಟ್ ವಿತರಣೆ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತ ಗಟ್ಟವಾಡಿ ಗ್ರಾಮದ ರವಿ ಎಂಬಾತನೊಂದಿಗೆ ಪಾರ್ಕಿಂಗ್ ಸ್ಥಳದಲ್ಲಿನ ಟಿಕೆಟ್ ಕೌಂಟರ್‌ನಲ್ಲಿ ಮಲಗಿದ್ದರು. ಸೋಮವಾರ ಮುಂಜಾನೆ ೩ ಗಂಟೆ ವೇಳೆಯಲ್ಲಿ ಅಪರಿಚಿತ ಕಾರು ಮಲಗಿದ್ದವರ ಮೇಲೆ ಹರಿದಿದೆ. ಆ ಕಾರಿನ ಚಾಲಕನ ಅಜಾಗ ರೂಕತೆ ಮತ್ತು ಅತಿ ವೇಗದಿಂದ ನಿದ್ರೆಯಲ್ಲಿದ್ದ ಪ್ರದೀಪ್ ಕುಮಾರ್ ಮತ್ತು ರವಿ ಅವರ ಮೇಲೆ ಕಾರು ಹರಿಸಿದ ಪರಿಣಾಮ ಕಾರಿನ ಚಕ್ರ ಪ್ರದೀಪನ ತಲೆಯ ಮೇಲೆ ಚಲಿಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಆತನ ಸ್ನೇಹಿತ ರವಿಯ ತಲೆ, ಮುಖ ಮತ್ತು ಕಾಲಿಗೆ ತೀವ್ರವಾ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮೃತ ಪ್ರದೀಪ್ ಕುಮಾರ್ ಪತ್ನಿ ಅಂಬಿಕಾ ಬಿಳಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಿದರು.

ಈ ಬಗ್ಗೆ ಮಾಹಿತಿ ಪಡೆದುಕೊಂಡ ಶಾಸಕ ದರ್ಶನ್ ಧ್ರುವನಾರಾಯಣ ಸೋಮವಾರ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್‌ ಅಪಘಾತ: ಓರ್ವ ಸಾವು

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್‌ ಕೋಚ್‌ ಬಸ್‌ ಕಂಟೇನರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ…

11 mins ago

ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು…

35 mins ago

ಮೈಸೂರು-ಬೆಂಗಳೂರು ಮೇಲ್ಸೇತುವೆ ಕಾಮಗಾರಿ ಪ್ರಕ್ರಿಯೆ ಆರಂಭ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯ ಮಣಿಪಾಲ್‌ ಜಂಕ್ಷನ್‌ ಫ್ಲೈಓವರ್‌…

49 mins ago

ಮಡಿಕೇರಿ| ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ

ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್‌…

1 hour ago

ರಾಸಲೀಲೆ ವಿಡಿಯೋ ವೈರಲ್‌: ಡಿಜಿಪಿ ರಾಮಚಂದ್ರರಾವ್‌ ಅಮಾನತುಗೊಳಿಸಿ ಆದೇಶ

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್‌…

2 hours ago

ನಂಜನಗೂಡು| ಮನೆ ಮುಂದೆ ಕಟ್ಟಿದ್ದ ನಾಯಿ ಹೊತ್ತೊಯ್ದ ಚಿರತೆ: ಜನರಲ್ಲಿ ಆತಂಕ

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ…

3 hours ago