ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ ನಿದ್ರಿಸುತ್ತಿದ್ದವನ ಮೇಲೆ ಕಾರೊಂದು ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾ ಮುಂಜಾನೆ ನಡೆದಿದೆ.
ತಾಲ್ಲೂಕಿನ ಗಟ್ಟವಾಡಿ ಗ್ರಾಮದ ನಿವಾಸಿ ಪ್ರದೀಪ್ ಕುಮಾರ್ (೩೩) ಮೃತಪಟ್ಟವರು. ಆತನ ಸ್ನೇಹಿತ ಅದೇ ಗ್ರಾಮದ ನಿವಾಸಿ ರವಿ (೩೦)ಎಂಬಾತ ತೀವ್ರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರದೀಪ್ ಕುಮಾರ್ ಹಾಗೂ ರವಿ ಜಾತ್ರೆಗೆ ಬಂದವರು ಭಾನುವಾರ ರಾತ್ರಿ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿ ರಾತ್ರಿ ನಾಟಕ ನೋಡಿಕೊಂಡು ಬಳಿಕ ಊರಿಗೆ ತೆರಳಲು ಮುಂದಾಗಿದ್ದರು. ಆದರೆಮಧ್ಯರಾತ್ರಿ ಬಸ್ಸು ಲಭ್ಯವಿಲ್ಲದ ಕಾರಣ ರಂಗಸ್ಥಳದ ಪಕ್ಕದ ಕುಪ್ಪರವಳ್ಳಿ ರಸ್ತೆಯ ತಾತ್ಕಾಲಿಕ ವಾಹನ ಪಾರ್ಕಿಂಗ್ ಆವರಣದ ಸ್ಥಳದಲ್ಲಿ ಟಿಕೆಟ್ ವಿತರಣೆ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತ ಗಟ್ಟವಾಡಿ ಗ್ರಾಮದ ರವಿ ಎಂಬಾತನೊಂದಿಗೆ ಪಾರ್ಕಿಂಗ್ ಸ್ಥಳದಲ್ಲಿನ ಟಿಕೆಟ್ ಕೌಂಟರ್ನಲ್ಲಿ ಮಲಗಿದ್ದರು. ಸೋಮವಾರ ಮುಂಜಾನೆ ೩ ಗಂಟೆ ವೇಳೆಯಲ್ಲಿ ಅಪರಿಚಿತ ಕಾರು ಮಲಗಿದ್ದವರ ಮೇಲೆ ಹರಿದಿದೆ. ಆ ಕಾರಿನ ಚಾಲಕನ ಅಜಾಗ ರೂಕತೆ ಮತ್ತು ಅತಿ ವೇಗದಿಂದ ನಿದ್ರೆಯಲ್ಲಿದ್ದ ಪ್ರದೀಪ್ ಕುಮಾರ್ ಮತ್ತು ರವಿ ಅವರ ಮೇಲೆ ಕಾರು ಹರಿಸಿದ ಪರಿಣಾಮ ಕಾರಿನ ಚಕ್ರ ಪ್ರದೀಪನ ತಲೆಯ ಮೇಲೆ ಚಲಿಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಆತನ ಸ್ನೇಹಿತ ರವಿಯ ತಲೆ, ಮುಖ ಮತ್ತು ಕಾಲಿಗೆ ತೀವ್ರವಾ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮೃತ ಪ್ರದೀಪ್ ಕುಮಾರ್ ಪತ್ನಿ ಅಂಬಿಕಾ ಬಿಳಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಿದರು.
ಈ ಬಗ್ಗೆ ಮಾಹಿತಿ ಪಡೆದುಕೊಂಡ ಶಾಸಕ ದರ್ಶನ್ ಧ್ರುವನಾರಾಯಣ ಸೋಮವಾರ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…
ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…
ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…
ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…
ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…