ನಂಜನಗೂಡು : ಮಂಡ್ಯದ ಮೂಲದ ವ್ಯಕ್ತಿಯೊಬ್ಬರು ನಂಜಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಜರುಗಿದೆ.
ಮಂಡ್ಯ ತಾಲೂಕಿನ ಬೆಳ್ಳಂಗನ ಹುಂಡಿಯ ಶಿಕ್ಷಕ ಚಂದ್ರು (45) ನಂಜನಗೂಡಲ್ಲಿ ಕಪಿಲಾ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.
ಮಂಗಳವಾರ ನಂಜನಗೂಡಿಗೆ ಕಾರಿನಲ್ಲಿಬಂದ ಅವರು ರಾಷ್ಟ್ರೀಯ ಹೆದ್ದಾರಿ 766ನ ಕಪಿಲಾ ಸೇತುವೆ ಮೇಲೆ ತಮ್ಮ ಕಾರು ನಿಲ್ಲಿಸಿ ಚಪ್ಪಲಿ ಮೊಬೈಲು ಹಾಗೂ ಕಾರಿನ ಕೀ-ಯನ್ನು ಕಾರಿನಲ್ಲೇ ಬಿಟ್ಟು ಅಲ್ಲೇ ಸೇತುವೆಯಿಂದ ನದಿಗೆ ಜಿಗಿದು ಅಸು ನೀಗಿದ್ದಾರೆ ಎನ್ನಲಾಗಿದೆ.
ಬಾಗಿಲು ತೆರದ ಕಾರು ಬಹಳ ಸಮಯ ಅಲ್ಲೆ ನಿಂತಿರುವದನ್ನು ಕಂಡವರು ಪೊಲೀಸರಿಗೆ ಸುದ್ದಿ ತಲುಪಿಸಿ ಅವರು ಬಂದು ಪರಿಕ್ಷಿಸಿ ಮಂಡ್ಯ ನೋಂದಣಿಯ ಕಾರಿನಿಂದ ಮಾಲಿಕರ ವಿಳಾಸ ಪತ್ತೆ ಮಾಡಿದಾಗ ಈ ಆತ್ಮಹತ್ಯೆಯ ಸುಳಿವು ದೊರಕಿತು.
ನಂತರ ನಂಜನಗೂಡು ನಗರ ಠಾಣೆಯ ಎಸ್ ರವೀಂದ್ರ ಹಾಗೂ ತಿಮ್ಮಯ್ಯ ಮೂರು ತೆಪ್ಪಗಳನ್ನು ತರಿಸಿ ನುರಿತ ಈಜುಗಾರರಿಂದ ಕಪಿಲಾ ನದಿಯನ್ನು ಜಾಲಾಡಿಸಿದ ಪರಿಣಾಮ ಚಂದ್ರು ದೇಹ ಸೇತುವೆಯಿಂದ 1.ಕಿ.ಮಿ ದೂರದಲ್ಲಿ ಅಯ್ಯಪ್ಪ ಸ್ವಾಮಿ ದೇಗುಲಬಳಿ ಪತ್ತೆಯಾಯಿತು.
ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡ ಪಟ್ಟಣದ ಪೋಲಿಸರು ನದಿಯಿಂದ ಶವವನ್ನು ತೆಗೆದು ಮರಣೋತ್ತರ ಪರಿಕ್ಷೆಗೆ ಕಳಿಸಿದರು.
ಜಿ.ಪಂ ಉದ್ಯೋಗಿ ಪತ್ನಿ ಭಾಗ್ಯ ಹಾಗೂ ಮಕ್ಕಳಾದ ಮನೋಜ ಪಾಟೀಲ್ ಹಾಗೂ ಭಾನುಪ್ರಕಾಶರನ್ನು ಅಗಲಿದ ಮಂಜು ಅವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿಯದಾಗಿದೆ.
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…
ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು…
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…