ಮೈಸೂರು

ಕಪಿಲಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ನಂಜನಗೂಡು : ಮಂಡ್ಯದ ಮೂಲದ ವ್ಯಕ್ತಿಯೊಬ್ಬರು ನಂಜಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಜರುಗಿದೆ.

ಮಂಡ್ಯ ತಾಲೂಕಿನ ಬೆಳ್ಳಂಗನ ಹುಂಡಿಯ ಶಿಕ್ಷಕ ಚಂದ್ರು (45) ನಂಜನಗೂಡಲ್ಲಿ ಕಪಿಲಾ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಮಂಗಳವಾರ ನಂಜನಗೂಡಿಗೆ ಕಾರಿನಲ್ಲಿಬಂದ ಅವರು ರಾಷ್ಟ್ರೀಯ ಹೆದ್ದಾರಿ 766ನ ಕಪಿಲಾ ಸೇತುವೆ ಮೇಲೆ ತಮ್ಮ ಕಾರು ನಿಲ್ಲಿಸಿ ಚಪ್ಪಲಿ ಮೊಬೈಲು ಹಾಗೂ ಕಾರಿನ ಕೀ-ಯನ್ನು ಕಾರಿನಲ್ಲೇ ಬಿಟ್ಟು ಅಲ್ಲೇ ಸೇತುವೆಯಿಂದ ನದಿಗೆ ಜಿಗಿದು ಅಸು ನೀಗಿದ್ದಾರೆ ಎನ್ನಲಾಗಿದೆ.

ಬಾಗಿಲು ತೆರದ ಕಾರು ಬಹಳ ಸಮಯ ಅಲ್ಲೆ ನಿಂತಿರುವದನ್ನು ಕಂಡವರು ಪೊಲೀಸರಿಗೆ ಸುದ್ದಿ ತಲುಪಿಸಿ ಅವರು ಬಂದು ಪರಿಕ್ಷಿಸಿ ಮಂಡ್ಯ ನೋಂದಣಿಯ ಕಾರಿನಿಂದ ಮಾಲಿಕರ ವಿಳಾಸ ಪತ್ತೆ ಮಾಡಿದಾಗ ಈ ಆತ್ಮಹತ್ಯೆಯ ಸುಳಿವು ದೊರಕಿತು.

ನಂತರ ನಂಜನಗೂಡು ನಗರ ಠಾಣೆಯ ಎಸ್ ರವೀಂದ್ರ ಹಾಗೂ ತಿಮ್ಮಯ್ಯ ಮೂರು ತೆಪ್ಪಗಳನ್ನು ತರಿಸಿ ನುರಿತ ಈಜುಗಾರರಿಂದ ಕಪಿಲಾ ನದಿಯನ್ನು ಜಾಲಾಡಿಸಿದ ಪರಿಣಾಮ ಚಂದ್ರು ದೇಹ ಸೇತುವೆಯಿಂದ 1.ಕಿ.ಮಿ ದೂರದಲ್ಲಿ ಅಯ್ಯಪ್ಪ ಸ್ವಾಮಿ ದೇಗುಲಬಳಿ ಪತ್ತೆಯಾಯಿತು.

ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡ ಪಟ್ಟಣದ ಪೋಲಿಸರು ನದಿಯಿಂದ ಶವವನ್ನು ತೆಗೆದು ಮರಣೋತ್ತರ ಪರಿಕ್ಷೆಗೆ ಕಳಿಸಿದರು.

ಜಿ.ಪಂ ಉದ್ಯೋಗಿ ಪತ್ನಿ ಭಾಗ್ಯ ಹಾಗೂ ಮಕ್ಕಳಾದ ಮನೋಜ ಪಾಟೀಲ್ ಹಾಗೂ ಭಾನುಪ್ರಕಾಶರನ್ನು ಅಗಲಿದ ಮಂಜು ಅವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿಯದಾಗಿದೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

1 hour ago

ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…

1 hour ago

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…

1 hour ago

ಅರ್ಜುನಹಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…

1 hour ago

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

1 hour ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

1 hour ago