ನಂಜನಗೂಡು : ಮಂಡ್ಯದ ಮೂಲದ ವ್ಯಕ್ತಿಯೊಬ್ಬರು ನಂಜಗೂಡಿನ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಜರುಗಿದೆ.
ಮಂಡ್ಯ ತಾಲೂಕಿನ ಬೆಳ್ಳಂಗನ ಹುಂಡಿಯ ಶಿಕ್ಷಕ ಚಂದ್ರು (45) ನಂಜನಗೂಡಲ್ಲಿ ಕಪಿಲಾ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.
ಮಂಗಳವಾರ ನಂಜನಗೂಡಿಗೆ ಕಾರಿನಲ್ಲಿಬಂದ ಅವರು ರಾಷ್ಟ್ರೀಯ ಹೆದ್ದಾರಿ 766ನ ಕಪಿಲಾ ಸೇತುವೆ ಮೇಲೆ ತಮ್ಮ ಕಾರು ನಿಲ್ಲಿಸಿ ಚಪ್ಪಲಿ ಮೊಬೈಲು ಹಾಗೂ ಕಾರಿನ ಕೀ-ಯನ್ನು ಕಾರಿನಲ್ಲೇ ಬಿಟ್ಟು ಅಲ್ಲೇ ಸೇತುವೆಯಿಂದ ನದಿಗೆ ಜಿಗಿದು ಅಸು ನೀಗಿದ್ದಾರೆ ಎನ್ನಲಾಗಿದೆ.
ಬಾಗಿಲು ತೆರದ ಕಾರು ಬಹಳ ಸಮಯ ಅಲ್ಲೆ ನಿಂತಿರುವದನ್ನು ಕಂಡವರು ಪೊಲೀಸರಿಗೆ ಸುದ್ದಿ ತಲುಪಿಸಿ ಅವರು ಬಂದು ಪರಿಕ್ಷಿಸಿ ಮಂಡ್ಯ ನೋಂದಣಿಯ ಕಾರಿನಿಂದ ಮಾಲಿಕರ ವಿಳಾಸ ಪತ್ತೆ ಮಾಡಿದಾಗ ಈ ಆತ್ಮಹತ್ಯೆಯ ಸುಳಿವು ದೊರಕಿತು.
ನಂತರ ನಂಜನಗೂಡು ನಗರ ಠಾಣೆಯ ಎಸ್ ರವೀಂದ್ರ ಹಾಗೂ ತಿಮ್ಮಯ್ಯ ಮೂರು ತೆಪ್ಪಗಳನ್ನು ತರಿಸಿ ನುರಿತ ಈಜುಗಾರರಿಂದ ಕಪಿಲಾ ನದಿಯನ್ನು ಜಾಲಾಡಿಸಿದ ಪರಿಣಾಮ ಚಂದ್ರು ದೇಹ ಸೇತುವೆಯಿಂದ 1.ಕಿ.ಮಿ ದೂರದಲ್ಲಿ ಅಯ್ಯಪ್ಪ ಸ್ವಾಮಿ ದೇಗುಲಬಳಿ ಪತ್ತೆಯಾಯಿತು.
ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡ ಪಟ್ಟಣದ ಪೋಲಿಸರು ನದಿಯಿಂದ ಶವವನ್ನು ತೆಗೆದು ಮರಣೋತ್ತರ ಪರಿಕ್ಷೆಗೆ ಕಳಿಸಿದರು.
ಜಿ.ಪಂ ಉದ್ಯೋಗಿ ಪತ್ನಿ ಭಾಗ್ಯ ಹಾಗೂ ಮಕ್ಕಳಾದ ಮನೋಜ ಪಾಟೀಲ್ ಹಾಗೂ ಭಾನುಪ್ರಕಾಶರನ್ನು ಅಗಲಿದ ಮಂಜು ಅವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿಯದಾಗಿದೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…